ಕೃಷಿಕರಿಗೆ ಬ್ಯಾಂಕ್ ಸೌಲಭ್ಯ ಅಗತ್ಯ : ಡಿವೈಎಸ್ಪಿ ಟಿ.ಮಂಜುನಾಥ
Farmers need bank facilities: DySP T. Manjunath
ಕಂಪ್ಲಿ 20.: ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದಲ್ಲಿ ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಶಾಖೆಯನ್ನು ಪೊಲೀಸ್ ಇಲಾಖೆಯ ಡಿವೈಎಸ್ಪಿ ಟಿ.ಮಂಜುನಾಥ ಇವರು ಶುಭ ಶುಕ್ರವಾರದಂದು ಉದ್ಘಾಟಿಸಿದರು.
ನಂತರ ಮಂಜುನಾಥ ಮಾತನಾಡಿ, ವಿಜಯನಗರ ಜಿಲ್ಲೆಯಲ್ಲಿ ಎರಡನೇ ಶಾಖೆಯಾಗಿ ಬ್ಯಾಂಕ್ ಆರಂಭಗೊಂಡಿದೆ. ವಿಶ್ವದಲ್ಲಿ ಒಂಬತ್ತು ಸಾವಿರ ಬರೋಡಾ ಬ್ಯಾಂಕ್ಗಳಿದ್ದು, ಕರ್ನಾಟಕದಲ್ಲಿ 700 ಶಾಖೆಗಳನ್ನು ಹೊಂದಿದೆ. ಗ್ರಾಹಕರಿಗೆ ಉತ್ತಮವಾಗಿ ಸೇವೆ ನೀಡುತ್ತಿದೆ. ಈ ಭಾಗದಲ್ಲಿ ಅತಿ ಹೆಚ್ಚಾಗಿ ಕೃಷಿಕರಿದ್ದು, ಮತ್ತು ಪ್ರವಾಸಿಗಳ ತಾಣವು ಕೂಡ ಹೌದು. ಆದ್ದರಿಂದ ಇಲ್ಲಿನ ಕೃಷಿಕರಿಗೆ ಬ್ಯಾಂಕ್ ಸೌಲಭ್ಯ ಅಗತ್ಯವಾಗಿದೆ. ಬ್ಯಾಂಕ್ ಸೌಲಭ್ಯದೊಂದಿಗೆ ಜನರು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಎಜಿಎಂ ಅಮರೇಶ ಮಾತನಾಡಿ, ಕೇಂದ್ರ ಸರ್ಕಾರದ ನಿರ್ದೇಶನದಂತೆ ದೇಶದಲ್ಲಿ ಸಾಕಷ್ಡು ಶಾಲೆಗಳನ್ನು ಸ್ಥಾಪಿಸುವ ಮೂಲಕ ಗ್ರಾಹಕರಿಗೆ ಒಳ್ಳೆಯ ಸೇವೆ ನೀಡಲಾಗುತ್ತಿದೆ. ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬುಕ್ಕಸಾಗರ ಗ್ರಾಮದಲ್ಲಿ ಶಾಖೆಯನ್ನು ಆರಂಭಿಸಲಾಗಿದೆ. ಗ್ರಾಹಕರ ಸ್ನೇಹಿಗಳಾಗಿ ಕಟ್ಟ ಕಡೆಯ ಗ್ರಾಹಕರಿಗೆ ಸೇವೆ ಒದಗಿಸಬೇಕು. ಬ್ಯಾಂಕ್ ಅಭಿವೃದ್ಧಿ ಜತೆಗೆ ಗ್ರಾಹಕರ ಅಭಿವೃದ್ಧಿ ಅಷ್ಟೇ ಮುಖ್ಯವಾಗಿದೆ. ಬ್ಯಾಂಕ್ ಗಳು ಸೂಪರ್ ಮಾರ್ಕೆಟ್ ಆಗಿವೆ. ಎಲ್ಲಾ ಸೌಲಭ್ಯಗಳು ಪ್ರತಿಯೊಬ್ಬರಿಗೂ ದೊರಕಲಿವೆ ಎಂದರು.
ಶಾಖೆ ವ್ಯವಸ್ಥಾಪಕ ಚಂದ್ರಶೇಖರ ಮಾತನಾಡಿ, ಈ ಭಾಗದ ಜನತೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬರೋಡಾ ಶಾಖೆ ಆರಂಭಿಸಲಾಗಿದೆ. ಜನತೆಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಸೇವೆ ಸಲ್ಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಡಿಜಿಎಂ ಶ್ರೀಹರಿ, ಗ್ರಾಪಂ ಉಪಾಧ್ಯಕ್ಷೆ ರಾಮದೇವಿ, ಪಿಡಿಒ ರಾಜೇಶ್ವರಿ, ಮುಖಂಡ ವೀರಭದ್ರ್ಪ, ಸಿಬ್ಬಂದಿಗಳಾದ ವಿನೋದ, ಓಂಪ್ರಕಾಶ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಹಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 