ರೈತರ ನಾನಾ ಬೇಡಿಕೆಗಳ ಆಗ್ರಹಿಸಿ ಪ್ರತಿಭಟನೆ
Farmers protest demanding fulfillment of various demands
ಹೂವಿನಹಡಗಲಿ 18: ರೈತರ ಸಾಲ ಮನ್ನಾ, ಬೆಳೆ ಪರಿಹಾರ, ಭೂರಹಿತ ಬಡವರಿಗೆ ಭೂಮಿ ಹಕ್ಕುಪತ್ರ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ತಾಲೂಕು ಘಟಕದ ವತಿಯಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟಿಸಿ ತಹಶೀಲ್ದಾರ್ ಸಂತೋಷ್ ಕುಮಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಮಂಡಳಿ ಸದಸ್ಯ ಹಲಗಿ ಸುರೇಶ್ ಮಾತನಾಡಿ, ಜಿಲ್ಲೆಗಲ್ಲಿ ಕೈಗಾರಿಕೆ, ನೀರಾವರಿ, ಸಾರಿಗೆ ಸೇರಿದಂತೆ ವಿವಿಧ ಯೋಜನೆಗಳಿಗೆ ಸರ್ಕಾರ ರೈತರ ಭೂಮಿಯನ್ನು ಭೂಸ್ವಾಧೀನ ಮಾಡಿಕೊಂಡಿದೆ. ಆದರೆಯೋಜನೆ ಆರಂಭಿಸಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಭೂಸ್ವಾಧೀನ ಕಾಯ್ದೆ ದುರ್ಬಳಕೆಯಾಗಿದೆ. ಯೋಜನೆ ಆರಂಬಿಸಬೇಕು. ಇಲ್ಲವೇ ರೈತರಿಗೆ ಭೂಮಿಯನ್ನು ವಾಪಸ್ ಕೊಡಬೇಕು. ಅತಿವೃಷ್ಟಿಯಿಂದ ಅನಾವೃಷ್ಟಿಯಿಂದಬೆಳೆಗಳು ಹಾನಿಯಾಗಿದ್ದು, ರೈತರಿಗೆ ಬೆಳೆ ಪರಿಹಾರ ನೀಡಬೇಕು. ಜೊತೆಗೆ ಸಹಕಾರ ಸಂಘದಲ್ಲಿ, ಬ್ಯಾಂಕುಗಳಲ್ಲಿ, ಮೈಕ್ರೋ ಫೈನಾನ್ಸ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು. ಸಿಪಿಐ ಕಾರ್ಯದರ್ಶಿ ಬಾವಾಜಿ ಜಂಗ್ಲಿ ಸಾಬ್ ಮಾತನಾಡಿ ಕೇಂದ್ರ ಸರ್ಕಾರ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ರಾಜ್ಯ ಸರ್ಕಾರ ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರ ತೆಗೆಯಬೇಕು ಎಂದು ಒತ್ತಾಯಿಸಿದರು.
ತಾಲೂಕು ಉಪಾಧ್ಯಕ್ಷ ನಾಗರಾಜ್ ಕೋಟ್ಯಾಳ್, ಜಿಲ್ಲಾ ಸಮಿತಿ ಸದಸ್ಯ ಬಸವರಾಜ್ ಸಂಶಿ, ಅಖಂಡ ಕರ್ನಾಟಕ ರೈತ ಸಂಘದ ಕಾರ್ಯದರ್ಶಿ ಶಿವರಾಜ್ ಸೇರಿದಂತೆ ರೈತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 