ಆಲಮಟ್ಟಿ ಜಲಾಶಯ ನೀರಿನ ಮಟ್ಟ ಅಧಿಸೂಚನೆಗೆ ಆಗ್ರಹಿಸಿ ಬಸವನ ಬಾಗೇವಾಡಿಯಲ್ಲಿ ರೈತರ ಪ್ರತಿಭಟನೆ
Farmers protest in Basavana Bagevadi demanding notification of the Almatti reservoir water level
ಬಸವನ ಬಾಗೇವಾಡಿ, ಜು. 2: 2ನೇ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ ಅಂತಿಮ ತೀರ್ಿನಂತೆ ಆಲಮಟ್ಟಿ ಜಲಾಶಯದಲ್ಲಿ 524.256 ಮೀಟರ್ ನೀರಿನ ಮಟ್ಟ ಸಂಗ್ರಹಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ತಕ್ಷಣ ಪ್ರಕಟಿಸಬೇಕು. ಜೊತೆಗೆ ಮುಳುಗಡೆಯಾಗಲಿರುವ 22 ಗ್ರಾಮಗಳ ರೈತರಿಗೆ ನ್ಯಾಯಯುತ ಪುನರ್ವಸತಿ, ಸಮರ್ಕ ಪರಿಹಾರ ಹಾಗೂ ಮೂಲಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಗುರುವಾರ ಬಸವನ ಬಾಗೇವಾಡಿಯಲ್ಲಿ ವಿವಿಧ ರೈತ, ಪ್ರಗತಿಪರ, ಕನ್ನಡಪರ ಹಾಗೂ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಮತ್ತು ಮೆರವಣಿಗೆ ನಡೆಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭವಾದ ಮೆರವಣಿಗೆ ಬಸ್ ನಿಲ್ದಾಣ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ಪ್ರತಿಭಟನಾಕಾರರು ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ತಹಶೀಲ್ದಾರ್ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಏಘಆಖಿ-ಋ ಅಂತಿಮ ತೀಪು ಪ್ರಕಟವಾಗಿ ಹಲವು ವರ್ಷಗಳಾದರೂ ಅದರ ಅನುಷ್ಠಾನಕ್ಕೆ ಅಗತ್ಯವಾದ ಅಧಿಸೂಚನೆ ಇನ್ನೂ ಹೊರಬಂದಿಲ್ಲ. ಇದರಿಂದ ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 22 ಗ್ರಾಮಗಳ ಸಾವಿರಾರು ಕುಟುಂಬಗಳು ಅನಿಶ್ಚಿತತೆಯಲ್ಲಿದ್ದು, ಅವರಿಗೆ ಸೂಕ್ತ ಪುನರ್ವಸತಿ, ಭೂಮಿಗೆ ಭೂಮಿ, ನ್ಯಾಯಸಮ್ಮತ ಪರಿಹಾರ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಹೊಣೆ ಸರ್ಕಾರಗಳ ಮೇಲಿದೆ ಎಂದು ಹೇಳಿದರು.
ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿವೆ ಎಂದು ಟೀಕಿಸಿದರು. ಉತ್ತರ ಕರ್ನಾಟಕದ ರೈತರಿಗೆ ನ್ಯಾಯಯುತವಾಗಿ ನೀರಿನ ಹಕ್ಕು ದೊರೆಯುವಂತೆ 524.256 ಮೀಟರ್ ನೀರಿನ ಮಟ್ಟಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನು ತಕ್ಷಣ ಪ್ರಕಟಿಸಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿ. ಭಗವಾನ್ ರೆಡ್ಡಿ, ಅನಿಲ್ ಹೊಸಮನಿ, ಅಕ್ರಮ ಮಾಶಾಳ್ಕರ್, ಸುರೇಶ್ ಜಿ.ಬಿ., ಅಪ್ಪಾಸಾಹೇಬ ಯರನಾಳ, ಲಲಿತಾ ಬಿಜ್ಜರಗಿ, ನೀಲಾಂಬಿಕಾ ಬಿರಾದಾರ, ವಿಠ್ಠಲ್ ಬಿರಾದಾರ, ಗಿರಿಮಲ್ಲಪ್ಪ ದೊಡ್ಡಮನಿ, ಹಣಮಂತರಾಯ ಗುಣಕಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 