ಇಂದು ಕಬ್ಬಿನ ದರ ನಿಗದಿ ಮತ್ತು ಪರಿಹಾರಕ್ಕಾಗಿ ರೈತರ ಪ್ರತಿಭಟನೆ
Farmers protest today for sugarcane price fixing and compensation
ಇಂದು ಕಬ್ಬಿನ ದರ ನಿಗದಿ ಮತ್ತು ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಬೆಳಗಾವಿ 29: ಬಸುರ್ತೆ ಮತ್ತು ಅತಿವಾಡ್ ಗ್ರಾಮಗಳ ರೈತರಿಗೆ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ಕಳೆದ 14 ವರ್ಷಗಳಿಂದ ಈ ನಿಟ್ಟಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಬೆಳಗಾವಿ ಜಿಲ್ಲೆಯ ಕಬ್ಬಿನ ಕಾರ್ಖಾನೆಗಳು ಮತ್ತು ರಾಜ್ಯ ಸರ್ಕಾರ ಇನ್ನೂ ಕಬ್ಬಿನ ದರವನ್ನೂ ನಿಗಧಿಪಡಿಸಿಲ್ಲ. ಈ ಕಾರಣಕ್ಕಾಗಿ ಕರ್ನಾಟಕ ರಾಯತ್ ಸಂಘಟನೆಯು ಈ ಪರಿಹಾರವನ್ನು ಪಾವತಿಸಲು, ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಕಬ್ಬಿನ ದರವನ್ನು ನಿಗದಿಪಡಿಸಲು ಪ್ರತಿಭಟನೆ ನಡೆಸಲಿದೆ. ಗುರುವಾರ, 30 ನೇ ತಾರೀಖಿನಂದು ಮಧ್ಯಾಹ್ನ 11 ಗಂಟೆಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಪ್ರತಿಭಟನೆಯನ್ನೂ ಆಯೋಜಿಸಿದೆ.ಮಹಾರಾಷ್ಟೃದಲ್ಲಿ ನೀಡಲಾಗುತ್ತಿರುವಂತೆಯೇ, ಕರ್ನಾಟಕದಲ್ಲಿಯೂ ಅದೇ ಕಬ್ಬಿನ ದರವನ್ನು ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಬಸುರ್ತೆ ಹಾಗೂ ಅತಿವಾಡ್ ಗ್ರಾಮಗಳಲ್ಲಿ ಸರ್ಕಾರವು ಭೂಮಿಯನ್ನೂ ವಶಪಡಿಸಿಕೊಂಡಿರುವ ರೈತರಿಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಸುರೇಶ್ ಪರಗಣ್ಣವರ್ ಎಚ್ಚರಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 