ರೈತರು ಜೈವಿಕ ಗೊಬ್ಬರ ಪದ್ಧತಿಯನ್ನು ಅಳವಡಿಸಿಕೊಳ್ಳಲಿ: ಮಾವರಕ
Farmers should adopt bio-fertilizer system: Mavaraka
ರೈತರು ಜೈವಿಕ ಗೊಬ್ಬರ ಪದ್ಧತಿಯನ್ನು ಅಳವಡಿಸಿಕೊಳ್ಳಲಿ: ಮಾವರಕ
ರಾಯಬಾಗ 04: ಪ್ರತಿಯೊಬ್ಬ ರೈತರು ಮಣ್ಣಿನ ಪರೀಕ್ಷೆ ಮಾಡುವುದರಿಂದ ಮಣ್ಣಿಗೆ ಅವಶ್ಯವಿರುವ ಪೋಷಕಾಂಶಗಳನ್ನು ನೀಡಲು ಅನುಕೂಲವಾಗುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ವಿನೋದ ಮಾವರಕ ಹೇಳಿದರು.
ಬುಧವಾರ ಪಟ್ಟಣದ ಕೃಷ್ಣಗೋದಾವರಿ ಸಹಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಿಎಂ ಪ್ರಣಾಮ ರೈತರ ಸಂಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತೀಯಾದ ರಸಗೊಬ್ಬರ ಬಳಕೆಯಿಂದ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ರೈತರು ಭೂಮಿ ಫಲವತ್ತತೆ ಹೆಚ್ಚಿಸಲು ಸಾವಯುವ ಗೊಬ್ಬರ ಬಳಸಬೇಕೆಂದರು. ಮುಂದಿನ ಪೀಳಿಗೆಗಾಗಿ ಭೂಮಿ ಆರೋಗ್ಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ರೈತರು ಜೈವಿಕ ಗೊಬ್ಬರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದರು.
ಕೃಷ್ಣಗೋದಾವರಿ ಸಹಕಾರಿಯ ಕೈಲಾಸ ಪುರಂವಾರ ಮಾತನಾಡಿ, ರೈತರು ಗೊಬ್ಬರ ಹಾಕುವ ಮುಂಚಿತವಾಗಿ ತಮ್ಮ ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಇದರಿಂದ ಭೂಮಿಗೆ ತಕ್ಕಂತೆ ಬೆಳೆಯನ್ನು ಬೆಳೆಯಲು ಅನುಕೂಲವಾಗುತ್ತದೆ ಎಂದರು.
ಅನುಷ ಪಾಟೀಲ, ನಂದು ದೇಸಾಯಿ, ಸಾಯಿನಾಥ ಮೊರಲವಾರ, ಮಹೇಶ ಮುಗಳಖೋಡ, ಶ್ರೀರಿಷ ಶಹಾಪೂರೆ, ರಾಮಾ ಬಸ್ತವಾಡೆ, ಶ್ರೀಶೈಲ ಸಾಬಾನೆ, ಭೀಮಾ ಬೆಟಗೇರಿ, ಮಹಾದೇವ ಪಾಟೀಲ ಹಾಗೂ ರೈತರು ಇದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 