ರೈತರು ಜೈವಿಕ ಗೊಬ್ಬರ ಪದ್ಧತಿಯನ್ನು ಅಳವಡಿಸಿಕೊಳ್ಳಲಿ: ಮಾವರಕ
Farmers should adopt bio-fertilizer system: Mavaraka
ರೈತರು ಜೈವಿಕ ಗೊಬ್ಬರ ಪದ್ಧತಿಯನ್ನು ಅಳವಡಿಸಿಕೊಳ್ಳಲಿ: ಮಾವರಕ
ರಾಯಬಾಗ 04: ಪ್ರತಿಯೊಬ್ಬ ರೈತರು ಮಣ್ಣಿನ ಪರೀಕ್ಷೆ ಮಾಡುವುದರಿಂದ ಮಣ್ಣಿಗೆ ಅವಶ್ಯವಿರುವ ಪೋಷಕಾಂಶಗಳನ್ನು ನೀಡಲು ಅನುಕೂಲವಾಗುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ವಿನೋದ ಮಾವರಕ ಹೇಳಿದರು.
ಬುಧವಾರ ಪಟ್ಟಣದ ಕೃಷ್ಣಗೋದಾವರಿ ಸಹಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಿಎಂ ಪ್ರಣಾಮ ರೈತರ ಸಂಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತೀಯಾದ ರಸಗೊಬ್ಬರ ಬಳಕೆಯಿಂದ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ರೈತರು ಭೂಮಿ ಫಲವತ್ತತೆ ಹೆಚ್ಚಿಸಲು ಸಾವಯುವ ಗೊಬ್ಬರ ಬಳಸಬೇಕೆಂದರು. ಮುಂದಿನ ಪೀಳಿಗೆಗಾಗಿ ಭೂಮಿ ಆರೋಗ್ಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ರೈತರು ಜೈವಿಕ ಗೊಬ್ಬರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದರು.
ಕೃಷ್ಣಗೋದಾವರಿ ಸಹಕಾರಿಯ ಕೈಲಾಸ ಪುರಂವಾರ ಮಾತನಾಡಿ, ರೈತರು ಗೊಬ್ಬರ ಹಾಕುವ ಮುಂಚಿತವಾಗಿ ತಮ್ಮ ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಇದರಿಂದ ಭೂಮಿಗೆ ತಕ್ಕಂತೆ ಬೆಳೆಯನ್ನು ಬೆಳೆಯಲು ಅನುಕೂಲವಾಗುತ್ತದೆ ಎಂದರು.
ಅನುಷ ಪಾಟೀಲ, ನಂದು ದೇಸಾಯಿ, ಸಾಯಿನಾಥ ಮೊರಲವಾರ, ಮಹೇಶ ಮುಗಳಖೋಡ, ಶ್ರೀರಿಷ ಶಹಾಪೂರೆ, ರಾಮಾ ಬಸ್ತವಾಡೆ, ಶ್ರೀಶೈಲ ಸಾಬಾನೆ, ಭೀಮಾ ಬೆಟಗೇರಿ, ಮಹಾದೇವ ಪಾಟೀಲ ಹಾಗೂ ರೈತರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 