ರೈತರಿಗೆ ಗುಣಮಟ್ಟದ ಬೀಜ ಮತ್ತು ಗೊಬ್ಬರವನ್ನು ಸರಬರಾಜು ಮಾಡಬೇಕು: ಸುರೇಶ ಮುಂಜೆ
Farmers should be supplied with quality seeds and fertilizers: Suresh Munje
ರಾಯಬಾಗ 29: ದೇಶದ ಅನ್ನದಾತ ಆಗಿರುವ ರೈತರಿಗೆ ಗುಣಮಟ್ಟದ ಬೀಜ ಮತ್ತು ಗೊಬ್ಬರವನ್ನು ಸರಬರಾಜು ಮಾಡಬೇಕೆಂದು ತಹಶೀಲ್ದಾರ ಸುರೇಶ ಮುಂಜೆ ಹೇಳಿದರು.
ಗುರುವಾರ ಪಟ್ಟಣದ ಡಾ.ಬಾಬು ಜಗಜೀವನರಾಂ ಸಭಾಭವನದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮಿನ ರಸಗೊಬ್ಬರ, ಕೀಟನಾಶಕ ಮತ್ತು ಬೀಜ ಮಾರಾಟಗಾರರ ಹಾಗೂ ಪರವಾನಗಿದಾರರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ನಿಗದಿ ಪಡಿಸಿದ ದರಪಟ್ಟಿಯಲ್ಲಿ ರಸಗೊಬ್ಬರ ಮಾರಾಟ ಮಾಡಬೇಕು. ಕಳಪೆ ಬೀಜ, ರಸಗೊಬ್ಬರ ಮಾರಾಟ ಮಾಡುವ ಮತ್ತು ಅಕ್ರಮ ದಾಸ್ತಾನು ಮಾಡುವ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು.
ಸಹಾಯಕ ಕೃಷಿ ನಿರ್ದೇಶಕ ವಿನೋದ ಮಾವರಕರ ಮಾತನಾಡಿ, ಮಾರಾಟಗಾರರು ರೈತರೊಂದಿಗೆ ಒಳ್ಳೆ ಬಾಂಧವ್ಯ ಹೊಂದಿರಬೇಕು. ರೈತರ ಬೇಡಿಕೆಗೆ ತಕ್ಕಂತೆ ಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು. ಈ ಬಾರಿ ಉತ್ತಮ ಮಳೆಯಾಗುತ್ತಿರುವುದರಿಂದ ರೈತರು ಭೂಮಿ ಹದ ಮಾಡಿಕೊಂಡು, ಬಿತ್ತನೆಗೆ ಎಲ್ಲ ಸಿದ್ದತೆ ಮಾಡಿಕೊಂಡಿರುವುದರಿಂದ ಅವರಿಗೆ ಅವಶ್ಯವಿರುವ ಬೀಜ ಮತ್ತು ರಸಗೊಬ್ಬರಗಳನ್ನು ದೊರಕುವಂತೆ ಎಲ್ಲರೂ ನೋಡಿಕೊಳ್ಳಬೇಕೆಂದರು. ರೈತರಿಗೆ ಅವಧಿ ಮೀರಿದ ದಾಸ್ತಾನು ಮಾರಾಟ ಮಾಡಿ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಂಡು, ಅವರ ಅಂಗಡಿ ಲೈಸನ್ಸ್ ರದ್ದು ಮಾಡುವುದಾಗಿ ಹೇಳಿದರು.
ಕೃಷಿ ಅಧಿಕಾರಿಗಳಾದ ಆರ್.ಎಸ್.ದತ್ತವಾಡೆ, ರಘುನಾಥ ಪಾಟೀಲ, ಮಾರಾಟಗಾರರ ಸಂಘದ ಅಧ್ಯಕ್ಷ ಶೀತಲ ಕೀರ್ತಿ, ಮಹೇಶ ಮುಗಳಖೋಡ, ಮಹಾದೇವ ಬೊರಗಾಂವೆ ಹಾಗೂ ತಾಲೂಕಿನ ರಸಗೊಬ್ಬರ ಮಾರಾಟಗಾರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 