ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಿದ ರೈತರು
Farmers staged a massive protest by blocking the road
ಇಂಡಿ 05: ತಾಲ್ಲೂಕಿನ ಹೃದಯ ಭಾಗದಲ್ಲಿರುವ ಶ್ರೀ ಬಸವೇಶ್ವರ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಆಗುವರಿಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 3ನೇ ದಿನಕ್ಕೆ ಕಾಲಿಟ್ಟಿದ್ದು ಇಂದು ರೈತರು ಇಂಡಿ ನಗರದ ಬಸವೇಶ್ವರ ವೃತ್ತದ ಬಳಿ ರಸ್ತೆ ತಡೆದು ಟಾಯರಿಗೆ ಬೆಂಕಿ ಹಚ್ಚಿ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡದ ಸರ್ಕಾರಕ್ಕೆ ದಿಕ್ಕಾರ ದಿಕ್ಕಾರ ಎಂದು ಕೂಗಿ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮಂತ ಇಂಡಿ ಅವರು ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ರೈತರ ಕಬ್ಬಿಗೆ ಪ್ರತಿ ಟನ್ ಕಬ್ಬಿಗೆ ಮೂರುವರೆ ಸಾವಿರ ರೂಪಾಯಿ ಬೆಲೆ ನಿಗದಿ ಮಾಡಬೇಕು ಎಂದು ಹೇಳಿದರು.ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲ ಮಾತನಾಡಿ ಈ ಬಾರಿ ಸುರಿದ ಭಾರಿ ಮಳೆಯಿಂದ ರೈತರ ಬದುಕು ಮೂರಾಬಟ್ಟೆ ಆಗಿ ಹೋಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಇವರಿಗೆ ಪರಿಹಾರ ನೀಡಿದೆ. ರೈತರೊಂದಿಗೆ ಚೆಲ್ಲಾಟವಾಡುತ್ತಿದೆ. ಹಾಗೂ ಪ್ರವಾಹ ಭೀತಿಯಿಂದ ಭೀಮಾ ತೀರದಲ್ಲಿ ಸುಮಾರು ಎಕರೆ ಕಬ್ಬು ಬೆಳೆ ಹಾಗೂ ಹತ್ತಿ ಮೆಕ್ಕೆಜೋಳ ತೋಗರಿ ಸೇರಿದಂತೆ ಅನೇಕ ಬೆಳೆಗಳು ಹಾನಿಯಾಗಿವೆ. ಹಾಗೂ ಅನೇಕ ಮನೆಗಳಿಗೆ ನೀರು ನುಗ್ಗಿ ಮನೆ ಕಳೆದುಕೊಂಡ ನೊಂದ ಫಲಾನುಭವಿಗಳಿಗೆ ಇನ್ನೂ ಮನೆ ಪರಿಹಾರ ನೀಡಿಲ್ಲ ಎಂದು ಹೇಳಿದರು,
ಬಿಜೆಪಿ ಮುಖಂಡರಾದ ಶೀಲವಂತ ಉಮರಾಣಿ ಅವರು ಮಾತನಾಡಿ ಸರ್ಕಾರ ಮಾತ್ರ ನವೆಂಬರ್ ಕ್ರಾಂತಿ ಡಿಸೆಂಬರ್ ಕ್ರಾಂತಿ ಹೇಳುತ್ತಾ ಜನರ ನಿದ್ದೆಗೆಡಿಸಿದೆ. ಕೇಂದ್ರ ಸರ್ಕಾರ ನಿಗದಿ ಪಡಿಸಿದ ದರವನ್ನು ರಾಜ್ಯ ಸರ್ಕಾರ ಜಾರಿ ತೋರುತ್ತಿಲ್ಲ, ನಾವು ರೈತ ಪರ ಅಂತ ಹೇಳುವ ಕಾಂಗ್ರೆಸ್ ಪಕ್ಷ ರೈತರ ಜ್ಯೋತಿ ಚೆಲ್ಲಾಟ ಆಡುತ್ತಾ ಕಾಲ ಹರಣ ಮಾಡುತ್ತದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಹಸೀರು ಸೇನ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಎಸ್ ಬಿ ಕೆಂಬೋಗಿ, ಅನೀಲಗೌಡ ಬಿರಾದಾರ, ಭೀಮನಗೌಡ ಬಿರಾದಾರ, ಬಾಳು ಮುಳಜಿ, ಅದೃಷಪ್ಪ ವಾಲಿ, ಶ್ರೀಧರ ಕ್ಷೇತ್ರಿ, ಎಸ್ ಎಸ್ ರೂಗಿಮಠ, ಮಲ್ಲು ಹಾವಿನಾಳ, ಅಶೋಕ ಅಕಲಾದಿ, ರವಿ ಗೌಳಿ, ಮಲ್ಲು ಗುಡ್ಲ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು. ಹಾಗೂ ಕಬ್ಬಿನ ಬೆಲೆ ಹೋರಾಟಕ್ಕೆ ಬೆಂಬಲ ರೈತರು ಹಂತಿ ಪದಗಳು ಹಾಗೂ ಡೊಳ್ಳಿನ ಪದಗಳು ಹಾಡುತ್ತಾ ಕುಣಿಯುತ್ತಿರುವುದು ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 