ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ
Farmers suicide in Maharashtra: Rahul Gandhi lashed out at the central government
ನವದೆಹಲಿ 03: ಕೃಷಿ ಸಮಸ್ಯೆಗಳತ್ತ ಮೋದಿ ಸರ್ಕಾರದ ತೀವ್ರತರವಾದ ಅಸಡ್ಡೆಯಿಂದ ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳವಾಗುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಿಂದಿಯಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ರೈತರ ಧೀರ್ಘ ಕಾಲದ ಬೇಡಿಕೆಗಳನ್ನು ಅದರಲ್ಲೂ ನಿರ್ದಿಷ್ಟವಾಗಿ ಕನಿಷ್ಠ ಬೆಂಬಲ ಬೆಲೆಗೆ ಶಾಸನಬದ್ಧ ಖಾತ್ರಿ ಮತ್ತು ಸಮಗ್ರ ಸಾಲ ಮನ್ನಾ ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
TNIE ವರದಿಯೊಂದನ್ನು ಉಲ್ಲೇಖಿಸಿ, ಮಹಾರಾಷ್ಟ್ರದಲ್ಲಿ 2025 ಜನವರಿಂದ ಮಾರ್ಚ್ ವರೆಗೂ 767 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮ್ಮನೆ ಯೋಚಿಸಿ, ಕೇವಲ ಮೂರು ತಿಂಗಳಲ್ಲಿ ಇಷ್ಟೊಂದು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ. ಈ ಕುಟುಂಬಗಳ ಬದುಕು ಹಾಳಾಗಿದೆ. ಸರ್ಕಾರ ಏನು ಮಾಡುತ್ತಿದೆ? ಮೌನವಾಗಿ ನೋಡುತ್ತಿದ್ದೇಯೆ? ಎಂದು ಪ್ರಶ್ನಿಸಿದ್ದಾರೆ.
ಬಿತ್ತನೆ ಬೀಜ, ರಸಗೊಬ್ಬರ, ಡೀಸೆಲ್ ಗಳ ಬೆಲೆ ಹೆಚ್ಚಳದಿಂದ ರೈತರನ್ನು ಸಾಲದ ಕೂಪಕ್ಕೆ ತಳ್ಳಲಾಗಿದೆ. ಆದಾಗ್ಯೂ ಅರ್ಥಪೂರ್ಣ ಕಾಯ್ದೆ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕನಿಷ್ಠ ಬೆಂಬಲ ಬೆಲೆ ಮತ್ತು ರೈತರ ಸಾಲ ಮನ್ನಾಕ್ಕೆ ಯಾವುದೇ ಖಾತ್ರಿ ಇಲ್ಲ. ಅವೆಲ್ಲವನ್ನೂ ನಿರ್ಲಕ್ಷಿಸಲಾಗುತ್ತಿದೆ. ಸರ್ಕಾರ ದೊಡ್ಡ ಕೈಗಾರಿಕೆಗಳತ್ತ ಉದಾರತೆ ಮೆರೆಯುತ್ತಿದೆ. ಯಾವುದೇ ಹಿಂಜರಿಕೆಯಿಲ್ಲದೆ ಅಂತಹವರ ಸಾವಿರಾರು ಕೋಟಿ ರೂ. ಮನ್ನಾ ಮಾಡಲಾಗುತ್ತಿದೆ. ಅನಿಲ್ ಅಂಬಾನಿ ಎಸ್ ಬಿಐಗೆ ರೂ. 48,000 ಕೋಟಿ ವಂಚನೆ ಮಾಡಿರುವ ಸುದ್ದಿ ನೋಡಿ ಎಂದಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 