ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ
Farmers visit the local village administrative officer's office
ಬೆಟಗೇರಿ 24 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಾರ್ವಜನಿಕರು ಮತ್ತು ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ ನೀಡಿ ನಿಮ್ಮ ಕೃಷಿ ಜಮೀನು ಮಾಲೀಕ ಮರಣ ಹೊಂದಿದ್ದರೆ, ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಗೌಡಪ್ಪ ಸಸಾಲಟ್ಟಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಹಾಗೂ ಕಂದಾಯ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಇ-ಪೌತಿ/ವಾರಸಾ ಖಾತೆ ಆಂದೋಲನದಡಿಯಲ್ಲಿ ತಮ್ಮ ಕೃಷಿ ಜಮೀನನ ಮಾಲೀಕರು ನಿಧನರಾಗಿದ್ದರೆ, ತಮ್ಮ ಕುಟುಂಬದ ಉತ್ತರಾಧಿಕಾರಿಗಳ ಹೆಸರಿಗೆ ತಮ್ಮ ಜಮೀನು ಬದಲಾವಣೆ ಮಾಡಿಕೊಳ್ಳಬೇಕು. ಸರ್ಕಾರದಿಂದ ದೊರಕುವ ವಿವಿಧ ಸಹಾಯ, ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುತ್ತೆದೆ. ತಮ್ಮ ಜಮೀನು ಮಾಲೀಕ ಮರಣ ಹೊಂದಿದ್ದರೆ ತಕ್ಷಣ ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಇ ಪೌತಿ ಖಾತೆ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 