ಆರ್.ಅಶೋಕ್ ಮುಂದೆಯೇ ವಿಷ ಸೇವಿಸಿದ ರೈತರು
Farmers who consumed poison in front of R. Ashok
ರಾಮನಗರ 16: ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗೆ ಭೂಸ್ವಾಧೀನ ಮಾಡಲು ಮುಂದಾಗಿರುವ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ವೇಳೆ ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲೇ ಕೆಲ ರೈತರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಚಿಕ್ಕಬೈರಮಂಗಲದ ನಾಗೇಶ್ ಕುಮಾರ್, ರಮ್ಯಾ ಆತ್ಮಹತ್ಯೆಗೆ ಯತ್ನಿಸಿದವರು. ರೈತರಿಗೆ ಬೆಂಬಲ ಸೂಚಿಸಿ ಬಿಜೆಪಿ ಮುಖಂಡರು ಮಂಗಳವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಮಾತನಾಡುತ್ತಿದ್ದ ಸಮಯದಲ್ಲಿ ತಮ್ಮ ನೋವನ್ನು ತೋಡಿಕೊಂಡ ಮಹಿಳೆ, ನಮ್ಮ ಭೂಮಿ ಕಸಿದು ಕೊಂಡರೆ ನಮಗೆ ಸಾಯುವುದನ್ನು ಬಿಟ್ಟು ಬೇರೆ ದಾರಿ ಇಲ್ಲ ಎಂದು ತಂದಿದ್ದ ವಿಷವನ್ನು ಸೇವಿಸಿದರು.
ನಾಗೇಶ್ ಕುಮಾರ್ ವಿಷ ಸೇವಿಸಿ ಅಸ್ವಸ್ಥಗೊಂಡರೆ, ರಮ್ಯಾ ವಿಷಸೇವನೆಗೆ ಮುಂದಾಗುತ್ತಿದ್ದಂತೆ ಸುತ್ತಲೂ ಇದ್ದ ಜನತೆ ವಿಷದ ಬಾಟಲಿಯನ್ನು ಕಸಿದು ಕೊಂಡರು. ವಿಷ ಸೇವಿಸಿದ ನಾಗೇಶ್ ಕುಮಾರ್ ಅವರನ್ನು ಬೈರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೈತರಿಗೆ ಸಾಂತ್ವನ ಹೇಳಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ನಿಮ್ಮೊಂದಿಗೆ ನಾವಿರುತ್ತೇವೆ. ಧೈರ್ಯಗೆಡಬೇಡಿ. ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ದುಡುಕು ನಿರ್ಧಾರ ತಳೆಯಬೇಡಿ. ಸರ್ಕಾರದ ವಿರುದ್ಧ ಹೋರಾಟ ಮಾಡಿ ನ್ಯಾಯ ಪಡೆಯೋಣ ಎಂದು ರೈತರಿಗೆ ಧೈರ್ಯತುಂಬಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 