ಆರ್.ಅಶೋಕ್ ಮುಂದೆಯೇ ವಿಷ ಸೇವಿಸಿದ ರೈತರು
Farmers who consumed poison in front of R. Ashok
ರಾಮನಗರ 16: ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗೆ ಭೂಸ್ವಾಧೀನ ಮಾಡಲು ಮುಂದಾಗಿರುವ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ವೇಳೆ ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲೇ ಕೆಲ ರೈತರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಚಿಕ್ಕಬೈರಮಂಗಲದ ನಾಗೇಶ್ ಕುಮಾರ್, ರಮ್ಯಾ ಆತ್ಮಹತ್ಯೆಗೆ ಯತ್ನಿಸಿದವರು. ರೈತರಿಗೆ ಬೆಂಬಲ ಸೂಚಿಸಿ ಬಿಜೆಪಿ ಮುಖಂಡರು ಮಂಗಳವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಮಾತನಾಡುತ್ತಿದ್ದ ಸಮಯದಲ್ಲಿ ತಮ್ಮ ನೋವನ್ನು ತೋಡಿಕೊಂಡ ಮಹಿಳೆ, ನಮ್ಮ ಭೂಮಿ ಕಸಿದು ಕೊಂಡರೆ ನಮಗೆ ಸಾಯುವುದನ್ನು ಬಿಟ್ಟು ಬೇರೆ ದಾರಿ ಇಲ್ಲ ಎಂದು ತಂದಿದ್ದ ವಿಷವನ್ನು ಸೇವಿಸಿದರು.
ನಾಗೇಶ್ ಕುಮಾರ್ ವಿಷ ಸೇವಿಸಿ ಅಸ್ವಸ್ಥಗೊಂಡರೆ, ರಮ್ಯಾ ವಿಷಸೇವನೆಗೆ ಮುಂದಾಗುತ್ತಿದ್ದಂತೆ ಸುತ್ತಲೂ ಇದ್ದ ಜನತೆ ವಿಷದ ಬಾಟಲಿಯನ್ನು ಕಸಿದು ಕೊಂಡರು. ವಿಷ ಸೇವಿಸಿದ ನಾಗೇಶ್ ಕುಮಾರ್ ಅವರನ್ನು ಬೈರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೈತರಿಗೆ ಸಾಂತ್ವನ ಹೇಳಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ನಿಮ್ಮೊಂದಿಗೆ ನಾವಿರುತ್ತೇವೆ. ಧೈರ್ಯಗೆಡಬೇಡಿ. ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ದುಡುಕು ನಿರ್ಧಾರ ತಳೆಯಬೇಡಿ. ಸರ್ಕಾರದ ವಿರುದ್ಧ ಹೋರಾಟ ಮಾಡಿ ನ್ಯಾಯ ಪಡೆಯೋಣ ಎಂದು ರೈತರಿಗೆ ಧೈರ್ಯತುಂಬಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 