ಗ್ರಾಮ ಪಂಚಾಯತ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ
Fatal attack on Gram Panchayat member
ಯರಗಟ್ಟಿ, 12 : ಗ್ರಾಮ ಪಂಚಾಯತ್ ಸದಸ್ಯನ ಕಿಡ್ನಾಪ ಮಾಡಿ ಮಾರಣಾಂತಿಕ ಹಲ್ಲೆ. ಕಿಡ್ನಾಪ್ ಮಾಡಿ ಎಸ್ಕೇಪ್ ಆಗ್ತಿರೋ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲೆ ಸೆರೆ. ಸಮೀಪದ ಸೋಪ್ಪಡ್ಲ ಗ್ರಾಮದಲ್ಲಿ ಘಟನೆ. ಸೋಪ್ಪಡ್ಲ ಗ್ರಾಮ ಪಂಚಾಯತ್ ಸದಸ್ಯ ಕಿರಣ ಹುಣಶ್ಯಾಳ (31) ಕಿಡ್ನ್ಯಾಪ ಆಗಿರುವ ವ್ಯಕ್ತಿ. ಗಾಯಗೊಂಡ ಕಿರಣ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗೆಳೆಯನ ಮದುವೆಗೆ ಹೋಗಿ ವಾಪಸ್ ಬರೋವಾಗ ಕಿರಣ ಹುಣಶ್ಯಾಳ ಕಿಡ್ನಾಪ ಮಾಡಿರೋ ಖತರ್ನಾಕ ಖದೀಮರು. ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ನಡೆದಿರೋ ಕಿಡ್ನಾಪ ಪ್ರಕರಣ ಎಂದು ತಿಳಿದುಬಂದಿದೆ.
ಸೋಪ್ಪಡ್ಲ ಗ್ರಾಮದ ಸಂಜು ತಳವಾರ, ಪ್ರವೀಣ್ ತಳವಾರ, ಬಸವರಾಜ ಗಸ್ತಿ ವಿರುದ್ಧ ಕಿಡ್ನಾಪ್ ಆರೋಪ. ಗೆಳೆಯನ ಮದುವೆ ಮುಗಿಸಿ ವಾಪಸ್ ಬರುವಾಗ ಕಿಡ್ನಾಪ ಮಾಡಿರೋ ಆರೋಪಿಗಳು. ಬಳಿಕ ಸೋಪ್ಪಡ್ಲ ಗ್ರಾಮಕ್ಕೆ ಕರೆತಂದು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಆರೋಪ ಕೇಳಿಬಂದಿದೆ. ಸ್ಥಳೀಯ ಮಾಹಿತಿ ಮೇರೆಗೆ ಆಗಮಿಸಿದ ಪೊಲೀಸರಿಂದ ಕಿರಣ ಹುಣಶ್ಯಾಳನನ್ನು ರಕ್ಷಣೆ ಮಾಡಿದ್ದಾರೆ. ಕಳೆದ ಎರಡು ತಿಂಗಳ ಹಿಂದಷ್ಟೇ ಗ್ರಾ. ಪಂ. ಸದಸ್ಯ ಕಿರಣ ಹುಣಶ್ಯಾಳ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿರುವ ಪ್ರವೀಣ್ ತಳವಾರ. ನನಗೆ ಎರಡು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು ಹಣ ಕೊಡದೇ ಇದ್ದಾಗ ಕಿಡ್ನಾಪ ಮಾಡಿ ಹಲ್ಲೆ ಮಾಡಿದ್ದಾರೆ ಎಂದ ಕಿರಣ ಹುಣಶ್ಯಾಳ ತಿಳಿಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 