ಜಯಶಂಕರ್ ಭೂಪಾಲಪಲ್ಲಿಯಲ್ಲಿ ವಿದ್ಯುತ್ ಶಾಕ್ಗೆ ತಂದೆ-ಮಗ ಸಾವು
Father and son die of electrocution in Jayashankar Bhupalpally
ಜಯಶಂಕರ್ ಭೂಪಾಲಪಲ್ಲಿ, ಆಗಸ್ಟ್ 14: ಕೃಷಿ ಜಮೀನಿನಲ್ಲಿದ್ದ ಬೋರ್ವೆಲ್ನ ಮೋಟಾರ್ನ್ನು ತೆಗೆಯಲು ಪ್ರಯತ್ನಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ತಂದೆ ಮತ್ತು ಮಗ ಮೃತಪಟ್ಟ ಘಟನೆ ಗುರುವಾರ ಸಂಜೆ ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯ ಮಲ್ಹಾರ್ ಮಂಡಲದ ಕೊಯ್ಯೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಟೆಕೊಲ್ಲ ಬಾಪು (48) ಹಾಗೂ ಅವರ ಪುತ್ರ ಮನೋಜ್ (20) ಎಂದು ಗುರುತಿಸಲಾಗಿದೆ. ಇವರು ಕಟಾರಂ ಮಂಡಲದ ಮರವಾಡಿಪಲ್ಲಿ ಗ್ರಾಮದ ನಿವಾಸಿಗಳಾಗಿದ್ದು, ರೈತರಾಗಿದ್ದರು. ಕೊಯ್ಯೂರು ಗ್ರಾಮದ ಹೊರವಲಯದಲ್ಲಿರುವ ತಮ್ಮ ಕೃಷಿ ಜಮೀನಿಗೆ ಬೋರ್ವೆಲ್ ಮೋಟಾರ್ ತೆಗೆಯಲು ಇಬ್ಬರೂ ತೆರಳಿದ್ದರು.
ಮೋಟಾರ್ ತೆಗೆಯುವ ವೇಳೆ ಇಬ್ಬರಿಗೂ ವಿದ್ಯುತ್ ಶಾಕ್ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾಹಿತಿ ತಿಳಿದು ಶುಕ್ರವಾರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 