ಹಾಡುಗಳಿಂದ ಸೌಂಡ್ ಮಾಡುತ್ತಿರುವ 'ಹಯಗ್ರೀವ'
Feb. Dhanveer and Sanjana Anand's film will hit the screens on 27th
ಲೋಕದರ್ಶನ ವರದಿ
ಫೆ. 27ರಂದು ಧನ್ವೀರ್, ಸಂಜನಾ ಆನಂದ್ ಅಭಿನಯದ ಚಿತ್ರ ತೆರೆಗೆ
'ಬಜಾರ್' ಖ್ಯಾತಿಯ ಧನ್ವೀರ್ ಅಭಿನಯದ 5ನೇ ಸಿನಿಮಾ 'ಹಯಗ್ರೀವ' ಬಿಡುಗಡೆಗೆ ದಿನ ಗಣನೆ ಆರಂಭವಾಗಿದ್ದು, ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲಿದೆ. ಈಗಾಗಲೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ನಲ್ಲಿ 'ಮೊದಲನೇ ಮಾತು...' ಎಂಬ ಹಾಡು ಬಿಡುಗಡೆ ಆಗಿ ಎರಡು ಮಿಲಿಯನ್ಗೂ ಹೆಚ್ಚು ಜನರಿಂದ ವೀಕ್ಷಣೆ ಆಗಿದೆ. ಇತ್ತೀಚೆಗಷ್ಟೇ ಚಿತ್ರದ ಎರಡನೇ 'ಸೇನೆ ಮುಖ್ಯಸ್ಥ ...' ಲಿರಿಕಲ್ ಹಾಡು ಬಿಡುಗಡೆ ಆಗಿದ್ದು, ಪ್ರೇಕ್ಷಕರಿಂದ ಪ್ರಶಂಸೆ ಪಡೆಯುತ್ತಿದೆ. ಈ ಗೀತೆಯನ್ನು ಚಂದನ್ ಶೆಟ್ಟಿ ಹಾಡಿದ್ದು, ಡಾ. ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಚಿತ್ರಕ್ಕೆ ಜೋಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ನಾಯಕಿಯಾಗಿ ಧನ್ವೀರ್ಗೆ ಸಾಥ್ ನೀಡಿದ್ದಾರೆ ಬ್ಯಾಂಗಲ್ ಬಂಗಾರಿ ಸಂಜನಾ ಆನಂದ್. ರಘು ಕುಮಾರ್ ನಿರ್ದೇಶನದ 'ಹಯಗ್ರೀವ' ಸಿನಿಮಾವನ್ನು ಕೆ.ವಿ.ಸಿ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಶ್ರೀಮತಿ ಪದ್ಮಾ ಸಮೃದ್ದಿ ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರಕ್ಕೆ ಮಹೇಶ್ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಫೆಬ್ರವರಿ ಕೊನೆ ವಾರ ತೆರೆಗೆ ಬರುತ್ತಿರುವ ಈ ಚಿತ್ರದ ತಾರಾಗಣದಲ್ಲಿ ಸಾಧು ಕೋಕಿಲ, ಶರತ್ ಲೋಹಿತ್ಶ್ವರ, ರಮೇಶ್ ಭಟ್, ಅಶ್ವಿನಿ ಗೌಡ, ಶೋಭರಾಜ್, ಸಂಗೀತಾ, ಕೃಷ್ಣ ಹೆಬ್ಬಾಳೆ, ಅಶ್ವಿನ್ ಹಾಸನ್, ಗಿಲ್ಲಿ ನಟ ಮುಂತಾದವರು ಇದ್ದಾರೆ. ಉಳಿದಂತೆ ಚಿತ್ರಕ್ಕೆ ಗೀರೀಶ್ ಆರ್ ಗೌಡ ಛಾಯಾಗ್ರಹಣ, ಸೈಲೇಶ್ ಕುಮಾರ್ ಹಾಗೂ ಚೇತನ್ ಸಿದ್ ಸಂಭಾಷಣೆ, ಭೂಷಣ್ ನೃತ್ಯ ನಿರ್ದೇಶನ, ಕೆ.ಎಂ. ಪ್ರಕಾಶ್ ಸಂಕಲನ, ಡಾ. ಕೆ.ರವಿವರ್ಮ, ಡಿಫರೆಂಟ್ ಡ್ಯಾನಿ, ಅರ್ಬನ್ ರಾಜ್ ಸಾಹನವಿದೆ. ಅಂದಂಗೆ ಸದ್ಯದಲ್ಲೇ ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 