ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿಗೆ ಮಾಲಾರೆ್ಣ, ಸನ್ಮಾನ
Felicitation and honoring of Basavalinga Swamiji of Rudrakshi Matha
ಹುಬ್ಬಳ್ಳಿ, ಜು. 9: ಸಮಾಜ ಸೇವೆ, ಸಧೃಡ ಸಮಾಜ ನಿರ್ಮಾಣ ಹಾಗೂ ಮೌಲ್ಯಾಧಾರಿತ ಬದುಕಿಗೆ ನಿರಂತರ ಮಾರ್ಗದರ್ಶನ ನೀಡುತ್ತಿರುವ ರುದ್ರಾಕ್ಷಿಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಬಸವಲಿಂಗ ಸ್ವಾಮೀಜಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ದತ್ತಿ ಕಾರ್ಯಕ್ರಮದಲ್ಲಿ ವಿಶೇಷ ಗೌರವ ಸಲ್ಲಿಸಲಾಯಿತು. ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶ್ರೀಗಳಿಗೆ ಮಾಲಾರೆ್ಣ ಮಾಡಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಭಕ್ತರು ಶ್ರೀಗಳ ಆಶೀರ್ವಾದ ಪಡೆದು ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಗ್ರಂಥಪಾಲಕರಾದ ಡಾ. ಸುರೇಶ್ ಡಿ. ಹೊರಕೇರಿ, ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಲೇಖಕ ಡಾ. ಗುರುರಾಜ್ ಪಾಟೀಲ, ಬಿ.ಎ. ಪಾಟೀಲ, ಎಸ್.ಕೆ. ಆದಪ್ಪನವರ, ಚಂದ್ರಶೇಖರ್ ಅಳಗುಂಡಗಿ, ಸಿ.ಜಿ. ಧಾರವಾಡಶೆಟ್ಟರ, ಪ್ರೊ. ಕೆ.ಎಸ್. ಕೌಜಲಗಿ, ವಿದ್ಯಾ ಒಂಟಮೂರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 