ಡಾ. ಎಸ್.ಆರ್. ಗುಂಜಾಳ 95ನೇ ಜನ್ಮದಿನ ಅಂಗವಾಗಿ ಗೌರವ ಸಮಾರಂಭ
Felicitation ceremony marking Dr. S.R. Gunjal's 95th birthday
ಲೋಕದರ್ಶನ ವರದಿ
ಹುಬ್ಬಳ್ಳಿ 3 : ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಗಳ ಆಶ್ರಯದಲ್ಲಿ ಹಿರಿಯ ಸಾಹಿತಿ, ಗ್ರಂಥಪಾಲಕ, ವಚನ ಸಾಹಿತ್ಯ ಸಂಶೋಧಕ ಹಾಗೂ ಬಸವಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಎಸ್.ಆರ್. ಗುಂಜಾಳ ಅವರ 95ನೇ ಜನ್ಮದಿನದ ಅಂಗವಾಗಿ ಅಭಿನಂದನಾ ಹಾಗೂ ಗೌರವ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಡಾ. ಎಸ್.ಆರ್. ಗುಂಜಾಳ ಅವರ ಜೀವನ, ಸಾಹಿತ್ಯ ಸೇವೆ ಮತ್ತು ವಚನ ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಲಾಯಿತು. ಅಲ್ಲದೆ, ಅವರ ಕುರಿತು ಲೇಖಕ ಹಾಗೂ ಬಸವತತ್ವ ಪ್ರಚಾರಕರಾದ ಪ್ರಕಾಶ ಗಿರಿಮಲ್ಲನವರ ಸಂಪಾದಿಸಿರುವ ಕೃತಿಯನ್ನು ಲೋಕಾರೆ್ಣ ಮಾಡಲಾಯಿತು.
ಪ್ರಕಾಶ ಗಿರಿಮಲ್ಲನವರ ಅವರನ್ನು ಶಾಲು ಹೊದಿಸಿ, ಮಾಲಾರೆ್ಣ ಮಾಡಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಡಾ. ಗುಂಜಾಳ ಅವರ ಸಾಹಿತ್ಯ, ಸಮಾಜಮುಖಿ ಚಿಂತನೆ ಹಾಗೂ ಶಿಕ್ಷಣ ಕ್ಷೇತ್ರದ ಸೇವೆಯನ್ನು ಕೊಂಡಾಡಿದರು. ಕಾರ್ಯಕ್ರಮದಲ್ಲಿ ಡಾ. ಸಿ.ಆರ್. ಕರಿಸಿದ್ದಪ್ಪ, ಡಾ. ಎಸ್.ಎಲ್. ಸಂಗಮ, ಸಾಹಿತಿ ರಂಜಾನ್ ದರ್ಗಾ, ಡಾ. ವಿನಾಯಕ ಬಂಕಾಪುರ, ಶಂಕರ ಕುಂಬಿ, ವೀರಣ್ಣ ಒಡ್ಡೀನ, ಡಾ. ಸುರೇಶ್ ಡಿ. ಹೊರಕೇರಿ, ಆರ್. ಮೂಗಿ, ರಾಜೇಂದ್ರ ಗುಂಜಾಳ, ವೀರೇಶ್ ಜಾಲಕಟ್ಟಿ, ಚಂದ್ರಶೇಖರ ಚನ್ನಂಗಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 