ಮಂಜಪ್ಪನ ಸನ್ನಿಧಿಯಲ್ಲಿ ನುಗ್ಗಲಿಗೆ ಸನ್ಮಾನ
Felicitation for Nuggalli
ಆಲಮಟ್ಟಿ 28 : ಕರುನಾಡು ಗಾಂಧಿ ಮಂಜಪ್ಪ ಹಡೇ9ಕರ ಸನ್ನಿಧಿಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಅವರಿಗೆ ಅಭೂತಪೂರ್ವ ಸನ್ಮಾನ ನೀಡಿ ಗೌರವಿಸಲಾಯಿತು.
ಶಿಕ್ಷಕರ ಸಂಘದ ಹೊಸ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಕನಾ9ಟಕ ಗಾಂಧಿ ಮಂಜಪ್ಪ ಹಡೇ9ಕರ ಸ್ಮಾರಕ ಭವನಕ್ಕೆ ಬೇಟಿ ನೀಡಿದ ಚಂದ್ರಶೇಖರ ನುಗ್ಗಲಿ ಮಂಜಪ್ಪನವರ ಕಂಚಿನ ಪುತ್ಥಳಿ ದರ್ಶನ ಪಡೆದು ನಮಿಸಿದರು. ಮಂಜಪ್ಪನವರ ಮೂತಿ9ಗೆ ಹೂಮಾಲೆ ಹಾಕಿ ಪೂಜಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಶ್ರೀಮದ್ ವೀರಶೈವ ವಿದ್ಯಾಲಯ ಅಸೋಸಿಯೇಷನ್ ಶಿಕ್ಷಣ ಅಂಗ ಸಂಸ್ಥೆಗಳ ಮುಖ್ಯಸ್ಥರು ಶಾಲಾ,ಸಂಸ್ಥೆಯ ಪರವಾಗಿ ಗೌರವಪೂರ್ವಕವಾಗಿ ನೀಡಿದ ಸನ್ಮಾನವನ್ನು ಸ್ವೀಕರಿಸಿ ಧನ್ಯತೆ ಭಾವ ಮೆರೆದರು. ಈ ಸಂದರ್ಭದಲ್ಲಿ ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಹಾಗೂ ಆಲಮಟ್ಟಿ ಎಸ್.ವಿ.ವಿ.ಸಂಸ್ಥೆಯ ಕ್ರಿಯಾಶೀಲ ಕಾರ್ಯದರ್ಶಿ, ಶಿಕ್ಷಣ ತಜ್ಞರಾದ ಪ್ರೊ,ಶಿವಾನಂದ ಪಟ್ಟಣಶೆಟ್ಟರ ಅವರು ದೂರವಾಣಿ ಮೂಲಕ ನುಗ್ಗಲಿ ಅವರನ್ನು ಸಂಪಕಿ9ಸಿ ರಾಜ್ಯಾಧ್ಯ3ಕ್ಷ ಹುದ್ದೆ ಅಲಂಕರಿಸಿರುವುದಕ್ಕೆ ಅಭಿನಂದಿಸಿದರು. ತಮ್ಮ ಕಾಲಾವಧಿಯಲ್ಲಿ ಶಿಕ್ಷಕರ ಸಂಘ ಉತ್ತಮ ರಚನಾತ್ಮಕ ಕಾರ್ಯ ಚಟುವಟಿಕೆಗಳ ಮೂಲಕ ಬಲಾಢ್ಯ ಹೊಂದಲಿ. ರಾಜ್ಯದ ಸಮಸ್ತ ಶಿಕ್ಷಕರ ಪಾಲಿಗೆ ಇದೀಗ ನವ ಆಶಾಕಿರಣವಾಗಿರುವ ತಾವು ಶಿಕ್ಷಕರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ದಾಪುಗಾಲಿರಿಸಿ ಸ್ಪಂದಿಸಿ. ಶಿಕ್ಷಕರ ವಲಯದಲ್ಲಿ ಭರವಸೆಯ ಬೆಳಕು ಚೆಲ್ಲಿ.ಶೈಕ್ಷಣಿಕ ರಂಗ ಗುಣಮಟ್ಟದತ್ತ ಸಾಗಲು ಮನಪೂರ್ವಕ ಶ್ರಮಿಸಿ ಕೈಜೋಡಿಸಿ ಎಂದು ನುಗ್ಗಲಿ ಅವರಿಗೆ ಪ್ರೊ,ಶಿವಾನಂದ ಪಟ್ಟಣಶೆಟ್ಟರ ಸಲಹೆಯಿತ್ತು ಶುಭ ಹಾರೈಸಿ ಅಭಿನಂದಿಸಿದರು.
ಸಂಸ್ಥೆಯ ಪರವಾಗಿ ಮುಖ್ಯ ಶಿಕ್ಷಕ ಜಿ.ಎಂ.ಕೋಟ್ಯಾಳ, ಎಸ್.ಆಯ್.ಗಿಡ್ಡಪ್ಪಗೋಳ ಇತರರು ನೂತನ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಅವರಿಗೆ ಶಾಲು ಹೊದಿಸಿ ಸತ್ಕರಿಸಿ ಗೌರವಿಸಿದರು. ಸ್ಮಾರಕದ ಕಾರ್ಯದರ್ಶಿ ಎಸ್.ವಿ.ಪಟ್ಟಣಶೆಟ್ಟಿ, ವಾಗ್ಮಿ ಮಹೇಶ್ ಗಾಳಪ್ಪಗೋಳ ಸೇರಿದಂತೆ ಅನೇಕ ಶಿಕ್ಷಕ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 