ಕೆಎಲ್ಇ ಸಂಸ್ಥೆಯ ನಿವೃತ್ತ ಕುದರಿ ದಂಪತಿಗೆ ಸನ್ಮಾನ
Felicitation for retired KLE Society couple, Mr. and Mrs. Kudari
ಲೋಕದರ್ಶನ ವರದಿ
ಹುಬ್ಬಳ್ಳಿ 13: ಬಸವೇಶ್ವರ ನಗರದ ನಿವಾಸಿ, ಕೆಎಲ್ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ನಿವೃತ್ತ ಅಧೀಕ್ಷಕ ಕಾಶಿನಾಥ ಮಲ್ಲಪ್ಪ ಕುದರಿ ಹಾಗೂ ಅನಸೂಯಾ ಕಾಶಿನಾಥ ಕುದರಿ ದಂಪತಿಯ 65ನೇ ವಿವಾಹ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಶಾಲು ಹೊದಿಸಿ, ಹಾರ ಹಾಕಿ ದಂಪತಿಯನ್ನು ಗೌರವಿಸಿದರು. ದಂಪತಿಗೆ ಶುಭಾಶಯಗಳನ್ನು ಕೋರಿದ ಅವರು, ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಹಾರೈಸಿದರು.
ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹಾಗೂ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ಸುರೇಶ್ ಡಿ. ಹೊರಕೇರಿ ಮಾತನಾಡಿ, ಕಾಶಿನಾಥ ಕುದರಿ ಅವರ ಸೇವೆ ಹಾಗೂ ವ್ಯಕ್ತಿತ್ವವನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಡಾ. ಶಶಿಧರ ಕಾಶಿನಾಥ ಕುದರಿ, ಸೀಮಾ ಶಶಿಧರ ಕುದರಿ, ಕುಟುಂಬ ಸದಸ್ಯರು ಹಾಗೂ ಬಂಧು-ಬಳಗ ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 