೪೦ ವರ್ಷಗಳ ಅಂಚೆ ಸೇವೆ ಸಲ್ಲಿಸಿದ ನಿವೃತ್ತ ಅಂಚೆ ನೌಕರರಿಗೆ ಸನ್ಮಾನ
Felicitation of retired postal employees who served for 40 years.
ಸವಣೂರು, ಜು. ೩: ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆಯ ಅಂಗವಾಗಿ ಅಧ್ಯಾಪಕ ನಗರದ ನಿವೃತ್ತ ಅಂಚೆ ನೌಕರ ಚಂದ್ರಶೇಖರ ಪೂಜಾರ ಅವರ ೪೦ ವರ್ಷಗಳ ಸೇವೆಯನ್ನು ಸ್ಮರಿಸಿ ಕಲ್ಪವೃಕ್ಷ ಮಹಿಳಾ ಮಂಡಳಿಯಿAದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಡಳಿಯ ಸದಸ್ಯರು ಚಂದ್ರಶೇಖರ ಪೂಜಾರ ದಂಪತಿಗೆ ಶಾಲು ಹೊದಿಸಿ, ಫಲಕ ನೀಡಿ ಗೌರವಿಸಿದರು.
ಮಂಡಳಿಯ ಅಧ್ಯಕ್ಷೆ ಮಂಜುಳಾ ಶಿವಲಿಂಗಯ್ಯ ಮಾತನಾಡಿ, ಅಂಚೆ ಇಲಾಖೆ ದೇಶದ ಅತ್ಯಂತ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಮೊಬೈಲ್ ಮತ್ತು ಇಂಟರ್ನೆಟ್ ಯುಗದಲ್ಲಿಯೂ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ಸೇವೆ ತಲುಪಿಸುತ್ತಿರುವುದು ಶ್ಲಾಘನೀಯ ಎಂದರು.
ಸದಸ್ಯೆ ವೆಂಕಮ್ಮ ಹೊಳೆಮ್ಮನವರ ಮಾತನಾಡಿ, ದೂರದ ಊರುಗಳಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಹಾಗೂ ಕುಟುಂಬಗಳ ನಡುವೆ ಪತ್ರಗಳ ಮೂಲಕ ಸಂಪರ್ಕ ಬೆಸೆಯುವಲ್ಲಿ, ಹಣದ ಆದೇಶ ಮತ್ತು ಮಹತ್ವದ ದಾಖಲೆಗಳನ್ನು ತಲುಪಿಸುವಲ್ಲಿ ಅಂಚೆ ಸಿಬ್ಬಂದಿ ವಹಿಸಿದ ಪಾತ್ರ ಅನನ್ಯವಾಗಿದೆ. ಮಳೆ-ಚಳಿ ಲೆಕ್ಕಿಸದೆ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಅಂಚೆ ನೌಕರರ ಸೇವೆ ಸದಾ ಸ್ಮರಣೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಂತಮ್ಮ ಗಾಣಿಗೇರ, ಮಾಲತೇಶ ಎಚ್., ಶಿಲ್ಪಾ ಹೊಳೆಮ್ಮನವರ ಸೇರಿದಂತೆ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 