ಡಾ. ಪ್ರಭಾಕರ ಕೋರೆಗೆ ವಿ.ಸೋಮಣ್ಣರಿಂದ ಸನ್ಮಾನ
Felicitation to Dr. Prabhakar Kore
ಬೆಳಗಾವಿ 07: ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರು ಡಾ.ಪ್ರಭಾಕರ ಕೋರೆಯವರ ಸ್ವಗೃಹಕ್ಕೆ ಆಗಮಿಸಿ ಸತ್ಕರಿಸಿದರು. ಭಾರತ ಸರಕಾರ ಪ್ರತಿಷ್ಠಿತ ನಾಗರಿಕ ಸನ್ಮಾನವಾದ ಪದ್ಮಶ್ರೀ ಪ್ರಶಸ್ತಿಗೆ ಪುರಸ್ಕೃತರಾದ ಡಾ. ಪ್ರಭಾಕರ ಕೋರೆವರಿಗೆ ವಿ.ಸೋಮಣ್ಣ ಅವರು ಶಾಲು ಹೊದಿಸಿ ಸತ್ಕರಿಸಿ ಅಭಿನಂದಿಸಿದರು.
ಕುಶಲೋಪಹರಿ ವಿಚಾರಿಸಿದ ವಿ.ಸೋಮಣ್ಣ ಅವರು ಶಿಕ್ಷಣ, ಕೃಷಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಡಾ.ಪ್ರಭಾಕರ ಕೋರೆಯವರು ಕೊಡುಗೆ ಅಪಾರವಾದುದು. ಅವರ ಸಮಾಜಮುಖಿಯಾದ ಸೇವೆ, ಧಾರ್ಮಿಕವಾದ ಮನಸ್ಸು ಅವರನ್ನು ಎತ್ತರಕ್ಕೆ ಬೆಳೆಸಿದೆ. ಕೆಎಲ್ಇ ಸಂಸ್ಥೆಯನ್ನು ಜಾಗತಿಕವಾಗಿ ವಿಸ್ತರಿಸಿದ ಅವರು ಸಮಾಜ ಸೇವೆಯನ್ನು ಒಂದು ವ್ರತವನ್ನಾಗಿಸಿ ಸ್ವೀಕರಿಸಿ ಶ್ರಮಿಸಿದ್ದಾರೆ. ಇಂದಿನ ಯುವಶಕ್ತಿಗೆ ಒಂದು ರೋಲ್ ಮಾಡೆಲ್ ಆಗಿರುವ ಡಾ.ಕೋರೆಯವರು ಈ ಶತಮಾನ ಕಂಡ ಅಭೂತಪೂವ ವ್ಯಕ್ತಿ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕೆಎಲ್ಇ ಸಂಸ್ಥೆಯ ನಿರ್ದೇಶಕರಾದ ಮಹಾಂತೇಶ ಕವಟಗಿಮಠ, ಮಾಜಿ ಸಂಸದ ರಮೇಶ ಕತ್ತಿ ಮೊದಲಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 