ಕುಮಾರ ಮಾಂಗಗೆ ಸನ್ಮಾನ
Felicitation to Kumar Maang
ಹಾರೂಗೇರಿ 19: 2024-ನೇ ಸಾಲೀನ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಕುಡಚಿ ಮತಕ್ಷೇತ್ರದ ಅಳಗವಾಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅಳಗವಾಡಿ ವಿದ್ಯಾರ್ಥಿ ಕುಮಾರ ವಿಕಾಸ ಮಾಂಗ ಪ್ರಶಸ್ತಿಗೆ ಭಾಜನರಾಗಿದ್ದು, ವಿದ್ಯಾರ್ಥಿಯನ್ನು ಸುವರ್ಣ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಅವರು ಸನ್ಮಾನಿಸಿ ಗೌರವಿಸಿದರು.
ನಂತರ ಮಾತನಾಡಿ ಅವರು ಮಕ್ಕಳಲ್ಲಿ ಬಹುಮುಖ ಪ್ರತಿಭೆಗಳಿದ್ದು,. ಶಿಕ್ಷಕರು ಹಾಗೂ ಪಾಲಕರು ಮಕ್ಕಳ ಕಲಿಕಾ ಆಸಕ್ತಿಗೆ ಪ್ರೋತ್ಸಾಹ ನೀಡಬೇಕು. ಯಾವ ಕ್ಷೇತ್ರದಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕೆಂಬ ಹಂಬಲವಿದೆಯೋ, ಆ ಕ್ಷೇತ್ರದಲ್ಲಿ ಮುಂದುವರೆಯಲು ಪ್ರೇರೆಪನೆ ನೀಡಬೇಕು. ಮಕ್ಕಳ ಭವಿಷ್ಯವನ್ನು ಉಜ್ವಲ ಮಾಡುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶಾಸಕ ತಮ್ಮಣ್ಣವರ ಹೇಳಿದರು. ಚಿಕ್ಕೋಡಿ ಡಯಟ್ ಉಪನ್ಯಾಸಕ ಕುಮಾರ ಮಾದರ, ಕುಡಚಿ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಹಾಲ್ಗುಣಿ, ಸಚೀನ ಹಳಕಲ್ಲ, ಭೀಮು ಚೌಗಲಾ, ವರ್ಧಮಾನ ಶಿರಹಟ್ಟಿ, ಕಲ್ಮೇಶ ಕಾಂಬಳೆ, ಪರಮಾನಂದ ಗಲಗಲಿ ಮತ್ತೀತರರು ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 