ಯಲ್ಲಮ್ಮ ದೇವಸ್ಥಾನದ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾದ ಶಾಸಕ ವಿಶ್ವಾಸ್ ವೈದ್ಯರವರಿಗೆ ಸನ್ಮಾನ
Felicitation to MLA Vishwas Vaidya
ಉಗರಗೋಳ 27: ಯಲ್ಲಮ್ಮ ದೇವಸ್ಥಾನದ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾಗಿ ನೇಮಕಗೊಂಡ ಶಾಸಕ ವಿಶ್ವಾಸ್ ವೈದ್ಯ ಅವರನ್ನು ಶನಿವಾರ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ. ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ನಿರ್ಧೇಶಕ ಶಿದ್ದನಗೌಡ ಗೋಡ್ರಾಸಿ ಶಾಲೂಹೊದಿಸಿ ಸತ್ಕರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಕ್ಷೆತ್ರ ಯಲ್ಲಮ್ಮನಗುಡ್ಡದ ಅಭಿವೃದ್ದಿಗಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು, ಮುಜರಾಯಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶದಲ್ಲಿ ಉತ್ತಮವಾಗಿ ಕೆಲಸ ಮಾಡಿ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ದಿಗೆ ಪ್ರಯತ್ನಿಸುತ್ತೆನೆ ಎಂದರು. ಚಂದ್ರು ಶಾಮನವರ, ನಾಗರತ್ನಾ ಚೋಳಿನ, ರೇಣುಕಾ ಶಿಂತ್ರಿ, ಬಿ ಎನ್ ಮುದಗೌಡ್ರ, ಅಲ್ಲಮಪ್ರಭು ಪ್ರಭುನವರ, ಆರ್ ಎಚ್ ಸವದತ್ತಿ, ಸಿ ಎನ್ ಕುಲಕರ್ಣಿ, ಏಕನಗೌಡ ಮುದ್ದನಗೌಡ್ರ, ಕೆಂಚನಗೌಡ ರೆಣ್ಕೀಗೌಡ್ರ, ಬಸವರಾಜ ಆಯಟ್ಟಿ, ಪಂಡಿತ ಯಡೂರಯ್ಯ, ಉಗರಗೋಳದ ಪೊಲೇಶಿ, ಪ್ರವೀಣ ರಾಮಪ್ಪನವರ, ಆನಂದ ಮುದ್ರಗಣಿ ಹಾಗೂ ದೆವಸ್ಥಾನ ಸಿಬ್ಬಂದಿ ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 