ಮನೆ ಬಾಗಿಲಿಗೆ ಹೋಗಿ ಹಿರಿಯ ಪತ್ರಕರ್ತ ಜಯಚಂದ್ರನ್ ಅವರಿಗೆ ಸನ್ಮಾನ
Felicitation to senior journalist Jayachandran
ಕಾರವಾರ 7 : ದಾಂಡೇಲಿಯ ರೋಟರಿ ಕ್ಲಬ್ ವತಿಯಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ಎನ್.ಜಯಚಂದ್ರನ್ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಅವರ ಮನೆಯಲ್ಲಿ ಸೋಮವಾರ ಸನ್ಮಾನಿಸಲಾಯಿತು.
ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ ಕುಮಾರ ರಾಯ್ ಮತ್ತು ನಿಕಟಪೂರ್ವ ರೋಟರಿ ಕ್ಲಬ್ ಅಧ್ಯಕ್ಷರಾದ ರಾಹುಲ್ ಬಾವಾಜಿ ಗೌರವಪೂರ್ವಕವಾಗಿ ಸನ್ಮಾನಿಸಿ, ಅಭಿನಂದಿಸಿದರು.ನಿಷ್ಠುರ ಮತ್ತು ಪ್ರಾಮಾಣಿಕ ಪತ್ರಕರ್ತರಾಗಿ ಹೆಸರುವಾಸಿಯಾಗಿರುವ ಎನ್. ಜಯಚಂದ್ರನ್ ದಾಂಡೇಲಿ ನಗರಸಭೆಯ ಹಗರಣಗಳ ಬಗ್ಗೆ ಸರಣಿ ವರದಿ ಪ್ರಕಟಿಸಿ, ಜಿಲ್ಲಾಡಳಿತದ ಗಮನ ಸೆಳೆದಿದ್ದರು.
ಪರಿಣಾಮಕಾರಿ ವರದಿಗಾರಿಕೆ ಹೆಸರುವಾಸಿಯಾಗಿರುವ ಪತ್ರಕರ್ತ ಜಯಚಂದ್ರನ್ ವೇದಿಕೆ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರನ್ನು ರೋಟರಿ ಕ್ಲಬ್ ನವರು , ಮನೆಗೆ ತೆರಳಿ ಸನ್ಮಾನಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 