ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮಂಜುನಾಥಗೆ ಸನ್ಮಾನ
Felicitation to senior journalist Manjunath who won state award
ಮೂಡಲಗಿ 24: ಹುಬ್ಬಳ್ಳಿಯ ವಿಶ್ವ ಭಗೀರಥ ಟ್ರಸ್ಟ್ ಚೇರ್ಮನ ಈಶ್ವರ ಶಿರಕೊಳ ಅವರ ಮಾತೋಶ್ರೀ ಅವರ ಜನುಮದಿನದ ಶತಮಾನೋತ್ಸವ ಕಾರ್ಯಕ್ರಮ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮಂಜುನಾಥ ಇವರನ್ನು ಗೌರವಿಸುವ ಕಾರ್ಯಕ್ರಮವನ್ನು ಜ.26ರಂದು ನಡೆಸಲಾಗುವುದು.
ಶ್ರೀನಿವಾಸ್ ಗಾರ್ಡನ್ ಕುಸುಗಲ್ ರಸ್ತೆ,ಹುಬ್ಬಳ್ಳಿಯಲ್ಲಿ ಸಂಜೆ 4 ಗಂಟೆಗೆ ರಾಜ್ಯಮಟ್ಟದ ಉಪ್ಪಾರ ವಕೀಲರ ಹಾಗೂ ಪತ್ರಕರ್ತರ ಸಮಾಲೋಚನ ಏರಿ್ಡಸಲಾಗಿದ್ದು ಸಮಾರಂಭದಲ್ಲಿ ಉಪ್ಪಾರ ಸಮಾಜದ ಬಹುದಿನಗಳ ಬೇಡಿಕೆಯಾಗಿರು ಮೀಸಲಾತಿ ಸೌಲಭ್ಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸೌಲಭ್ಯಗಳು, ನಿಗಮ ಮಂಡಳಿಗಳ ನೇಮಕ, ಎಮ್.ಎಲ್.ಸಿ. ಸ್ಥಾನಮಾನ, ರಾಜ್ಯ /ಜಿಲ್ಲೆ/ ತಾಲೂಕು ಮಟ್ಟದಲ್ಲಿ ಸರ್ಕಾರದಿಂದ ನಿವೇಶನ ಗುರುತಿಸಿ ಭಗೀರಥ ಭವನಗಳ ನಿರ್ಮಾಣ ,ಹಾಗೂ ಸಮಾಜದ ಮುಖಂಡರಿಗೆ ಸೂಕ್ತ ರಾಜಕೀಯ ಸ್ಥಾನಮಾನ ಹೀಗೆ ಹತ್ತು ಹಲವಾರು ವಿಷಯಗಳ ಕುರಿತು ಬಹುದಿನಗಳಿಂದ ಹೋರಾಟ ಮಾಡುತ್ತ ಬಂದರೂ ಯಾವುದೇ ನ್ಯಾಯ ದೊರೆತಿಲ್ಲ. ಈ ಎಲ್ಲ ಬೇಡಿಕೆಗಳಿಗೆ ಮತ್ತು ಹೋರಾಟಗಳಿಗೆ ಒಂದು ಕಾನೂನು ಚೌಕಟ್ಟಿನಲ್ಲಿ ಸರ್ಕಾರದ ಮತ್ತು ರಾಜಕೀಯ ಪಕ್ಷಗಳ ಕಣ್ತೆರೆಸುವ ಪ್ರಯತ್ನ ಮಾಡೋಣ ಕರ್ನಾಟಕ ರಾಜ್ಯದ ಉಪ್ಪಾರ ಸಮಾಜದ ಎಲ್ಲ ವಕೀಲರು ಮತ್ತು ಪತ್ರಕರ್ತ ಮಿತ್ರರು ಈ ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ತಿಳಿಸಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ (ರಿ)ದ ರಾಜ್ಯಾಧ್ಯಕ್ಷ, ವಕೀಲರಾದ ವಿಷ್ಣು ಲಾತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 