ಶ್ರಮಜೀವಿಗಳಿಗೆ- ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಗದಗ 01:  ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಹಮ್ಮಿಕೊಂಡಿದ್ದ ಶ್ರಮಜೀವಿಗಳ ಸಮಾವೇಶದಲ್ಲಿ ಸ್ಲಂ ಪ್ರದೇಶದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಮತ್ತು ಶ್ರಮಜೀವಿಗಳಿಗೆ ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ  ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್‌. ಮಾನ್ವಿ, ರಾಜ್ಯ ಸಮಿತಿ ಸಂಚಾಲಕ ಎ.ನರಸಿಂಹಮೂರ್ತಿ, ಸ್ಲಂ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಸ್ಲಂ ಜನಾಂದೋಲನ-ಕರ್ನಾಟಕ ಸಂಘಟನಾ ಸಂಚಾಲಕ ಜರ್ನಾಧನ ಹಳ್ಳಿಬೆಂಚಿ, ಸಾವಿತ್ರಿಬಾ ಪುಲೆ ಮಹಿಳಾ ಸಮಿತಿ ಸಂಚಾಲಕಿ ಶೋಭಾ ಕಮತರ, ಜಿಲ್ಲಾ ದಲಿತ ಸಂಘರ್ಸ ಸಮಿತಿ ಸಂಚಾಲಕ ವೆಂಕಟೇಶಯ್ಯ, ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೆಹರುನಿಸಾ ಡಂಬಳ, ಆಶಾ ಚೊಳೆಚಗುಡ್ಡ, ಮಕ್ತುಮಸಾಬ ಮುಲ್ಲಾನವರ, ನಜೀರ ಹಾವಗಾರ, ಸಾಕ್ರುಬಾಯಿ ಗೋಸಾವಿ ಮುಂತಾದವರು ಉಪಸ್ಥಿತರಿದ್ದರು.