ಕೊಪ್ಪಳದಲ್ಲಿ ಹಡಪದ ಸಮಾಜದಿಂದ ಸನ್ಮಾನ
ಲೋಕದರ್ಶನ ವರದಿ
ಕೊಪ್ಪಳ 05: ನಗರದ ಬೆಂಕಿನಗರ ಬಡಾವಣೆಯಲ್ಲಿರುವ ಹಡಪದ ಸಮಾಜನ ಕ್ಷೇಮಾಭಿವೃದ್ಧಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಇತ್ತೀಚೆಗಷ್ಟೆ ನೇಪಾಳ ರಾಷ್ಟ್ರದಲ್ಲಿ ಆಯೋಜಿಸಿದ್ದ ಕನ್ನಡದ ಕಂಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಾಯ್ನಾಡಿಗೆ ಮರಳಿದ ಕಲಾವಿದೆ ಗಾಯಕಿ ಅನ್ನಪೂರ್ಣಮ್ಮ ಮಹೇಶ್ ಮನ್ನಾಪೂರ ಮತ್ತಿತರಿಗೆ ಮಂಗಳವಾರ ಸಂಜೆ ಏರ್ಪಡಿಸಿದ ಸನ್ಮಾನ ಸಮಾರಂಭ ಜರುಗಿತು.
ಇತ್ತೀಚೆಗೆ ನೇಪಾಳ ರಾಷ್ಟ್ರದಲ್ಲಿ ಆಯೋಜಿಸಿದ್ದ ಕನ್ನಡದ ಕಂಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಾಯ್ನಾಡಿಗೆ ಮರಳಿದ ಕಲಾವಿದೆ ಗಾಯಕಿ ಅನ್ನಪೂರ್ಣಮ್ಮ ಮಹೇಶ್ ಮನ್ನಾಪೂರ, ಶ್ರೀನಿವಾಸ್ ಚಿತ್ರಗಾರ ಮತ್ತು ಅವರ ಪತ್ನಿ ವಿದ್ಯಾವತಿ ಚಿತ್ರಗಾರ, ಕು.ವೀಣಾ ಚಿತ್ರಗಾರ ಮತ್ತು ಶಿಕ್ಷಕಿ ವಿಜಯಕುಮಾರಿ ರವರಿಗೆ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಡಾ. ಮಹಾಂತೇಶ್ ಮಲ್ಲನಗೌಡರ್ ಹಿರಿಯ ಪತ್ರಕರ್ತರಾದ ಜಿ.ಎಸ್.ಗೋನಾಳ, ಎಂ ಸಾದಿಕ್ ಅಲಿ ಆಗಮಿಸಿದ್ದರು ಸಮಾಜದ ಜಿಲ್ಲಾಧ್ಯಕ್ಷ ಮಂಜುನಾಥ ಹಂದ್ರಾಳ ಸಮಾಜದ ಹಿರಿಯರಾದ ಬಸಪ್ಪ ಹಳ್ಳಿಕೇರಿ, ಮಲ್ಲಪ್ಪ ಚಿಕೇನಕೊಪ್ಪ, ರಮೇಶ ಚಟ್ನಿಹಾಳ, ದ್ಯಾಮಣ್ಣ ಮಾದಿನೂರ, ಮಾಜಿ ಸೈನಿಕ ಶಿವಾಜಿ ಹಡಪದ, ನಿಂಗಪ್ಪ ಹಂದ್ರಾಳ ಸೇರಿದಂತೆ ಹಡಪದ ಸಮಾಜದ ಬಾಂಧವರು ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 