ಠಾಣೆಯಲ್ಲಿ ಮಣ್ಣಿನ ಎತ್ತು ತಯಾರಿಸಿ ಗಮನ ಸೆಳೆದ ಮಹಿಳಾ ಕಾನಸ್ಟೇಬಲ್
Female constable draws attention by making clay bull at police station
ಜಮಖಂಡಿ 14 : ಶಹರ ಪೋಲಿಸ್ ಠಾಣೆಯ ಮಹಿಳಾ ಕಾನಸ್ಟೇಬಲ್ ಲಕ್ಷ್ಮೀ ಕುಂಬಾರ ಅವರು ಮಣ್ಣಿನ ಎತ್ತುಗಳನ್ನು ತಯಾರಿಸಿದರು. ಮೂಲತ ಹೊಸೂರ ಗ್ರಾಮದವರು ಕುಲಕಸುಬನ್ನು ಹವ್ಯಾಸವಾಗಿ ಉಳಿಸಿಕೊಂಡು ಬಹನಟ್ಟಿ ನಗರದ ಮಲ್ಲಿಕಾರ್ಜುನ ದೇವಸ್ಥಾನ ಹತ್ತಿರ ಮಣ್ಣಿನ ಎತ್ತುಗಳುನ್ನು ತಯಾರಿಸುವ ಮೂಲಕ ಜನರ ಗಮನ ಸೆಳೆದರು.
ಜಮಖಂಡಿ ಶಹರ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನಸ್ಟೇಬಲ್ ಹುದ್ದೆ ಸೇವೆ ಸಲ್ಲಿಸುತಿದ್ದಾರೆ. ತಮ್ಮ ಮನೆತನದ ಮೂಲ ಕಸಬನ್ನು ಮಾತ್ರ ಅವರು ಬಿಟ್ಟಿಲ್ಲ ವೃತ್ತಿಯ ಜೊತೆಗೆ ಕಾರು ಹುಣ್ಣಿಮೆಯ ಸಂದರ್ಭದಲ್ಲಿ ಎತ್ತುಗಳನ್ನು ಹಾಗೂ ಗುಳ್ಳವ್ವನನ್ನು ಮಾಡುವುದು ನಂತರ ಮಣ್ಣಿನ ಒಲೆ ಹಾಗೂ ಗಡಿಗೆ- ಕುಡಿಕೆಗಳನ್ನು ತಯಾರಿಸುವಲ್ಲಿ ತಮ್ಮ ಕುಟುಂಬದ ಸದಸ್ಯರಿಗೆ ನೆರವಾಗುತ್ತಾರೆ ಎಂದರು.ನಾವು ಮೊದಲು ನಮ್ಮ ಮನೆತನದ ಮೂಲ ಕಸುಬನ್ನು ಮುಂದುವರೆಸಿಕೊಂಡು ಬರಬೇಕು. ನಂತರ ನಮ್ಮ ಮಕ್ಕಳು ಕೂಡಾ ಅದನ್ನು ಮನ್ನಡೆಸುತ್ತಾರೆ. ನಾವು ಯಾವುದೇ ರೀತಿಯ ಸಂಕೋಚ ಪಡಬಾರದು. ದೇಶದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿಕೊಂಡು ಹೋಗುವುದು ಕೂಡಾ ಮುಖ್ಯವಾಗಿದೆ ಎಂದು ಲಕ್ಷ್ಮಿ ಕುಂಬಾರ ಮನದಾಳದ ಮಾತನ್ನು ಹೇಳಿದರು.ಪೋಟೋ: ಜಮಖಂಡಿ ಶಹರ ಪೋಲಿಸ್ ಠಾಣೆಯ ಮಹಿಳಾ ಕಾನಸ್ಟೇಬಲ್ ಲಕ್ಷ್ಮೀ ಕುಂಬಾರ ಮಣ್ಣಿನ ಎತ್ತುಗಳನ್ನು ತಯಾರಿಸುತ್ತಿರುವದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 