ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
Female students are selected for state level in essay competition
ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಕಂಪ್ಲಿ 10: ರಾಷ್ಟ್ರೀಯ ಮತದಾನ(ಎನ್ವಿಡಿ) ದಿನಾಚರಣೆ ಪ್ರಯುಕ್ತ ಬಳ್ಳಾರಿ ನಗರದ ಸರಳಾದೇವಿ ಕಾಲೇಜಿನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕಂಪ್ಲಿ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕೀರ್ತಿ ಪತಾಕಿ ಹಾರಿಸಿದ್ದಾರೆ. ಇಲ್ಲಿನ ನಡೆದ ಜಿಲ್ಲಾ ಮಟ್ಟದ ಪ್ರಬಂಧ(ಕನ್ನಡ) ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಎನ್.ಕವಿತಾ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಮತ್ತು ಪ್ರಬಂಧ(ಇಂಗ್ಲೀಷ್)ಸ್ಪರ್ಧೆಯಲ್ಲಿ ಯು.ಭಾರತಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಧಾಪುಗಾಲು ಇಟ್ಟಿದ್ದಾರೆ. ಮತ್ತು ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಯಲ್ಲಿ ಕೆಲ ವಿದ್ಯಾರ್ಥಿಗಳು ದ್ವಿತೀಯ, ತೃತೀಯ ಸ್ಥಾನಕ್ಕೆ ಸೈ ಎನ್ನಿಸಿಕೊಂಡರು. ಈ ಸ್ಪರ್ಧೆಯಲ್ಲಿ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಮತ್ತು ಕಂಪ್ಲಿಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 