ಹಬ್ಬ-ಹರಿದಿನಗಳು ನಾಡಿನ ಸಂಸ್ಕೃತಿಯ ಪ್ರತೀಕ: ಕಸ್ತೂರೆವ್ವ ಹಿರೇಮಠ
Festivals are a symbol of the country's culture: Kasturevva Hiremath
ಬೆಟಗೇರಿ 26: ಮನುಷ್ಯನು ತಮಗೆ ಸಾಧ್ಯವಾದಷ್ಟು ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಾಯ, ಸಹಕಾರ ನೀಡುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಕಸ್ತೂರೆವ್ವ ಸಂಗಯ್ಯ ಹಿರೇಮಠ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆ.26ರಂದು ನಡೆದ ಭಜನಾ ಮಂಗಲೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ಹಬ್ಬ-ಹರಿದಿನಗಳು, ಜಾತ್ರಾಮಹೋತ್ಸವ, ನಾಡಿನ ಸಂಸ್ಕೃತಿ, ಸಂಪ್ರದಾಯದ ಪ್ರತೀಕವಾಗಿವೆ. ಸ್ಥಳೀಯರು ಧಾರ್ಮಿಕ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಾಯ, ಸಹಕಾರವನ್ನು ಶ್ಲಾಘಿಸಿದರು.
ಸಂಗಯ್ಯ ಹಿರೇಮಠ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಮಹಾಂತೇಶ ಸಿದ್ನಾಳ ಅಧ್ಯಕ್ಷತೆ ವಹಿಸಿದ್ದರು.
ಬೆಟಗೇರಿ ಗ್ರಾಮದ ವೀರಭದ್ರೇಶ್ವರ ಮಹಿಳಾ ಭಜನಾ ಮಂಡಳಿ ವತಿಯಿಂದ ಶ್ರಾವಣ ಮಾಸದ ನಿಮಿತ್ಯವಾಗಿ ಸ್ಥಳೀಯ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಇಲ್ಲಿಯ ಮಹಿಳೆಯರಿಂದ ಸತತ 11 ದಿನಗಳ ಕಾಲ ಪ್ರತಿ ದಿನ ಸಂಜೆ 7 ಗಂಟೆಯಿಂದ 9 ಗಂಟೆ ತನಕ ಭಜನಾ ಕಾರ್ಯಕ್ರಮ ನಡೆದು, ಸ್ಥಳೀಯ ವೀರಭದ್ರೇಶ್ವರ ದೇವರ ಗದ್ದುಗೆಗೆ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ ಬಳಿಕ ಭಜನಾ ಮಂಗಲೋತ್ಸವ, ಅನ್ನಪ್ರಸಾದ ಕಾರ್ಯಕ್ರಮ ನಡೆಯಿತು.
ಇಲ್ಲಿಯ ವೀರಭದ್ರೇಶ್ವರ ದೇವರ ವಿವಿಧ ಕಾರ್ಯಕ್ರಮಗಳ ಆಯೋಜಕ ಸಮಿತಿ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗಣ್ಯರು, ಸಂತ ಶರಣರು, ಪುರವಂತರು, ಮಹಿಳೆಯರು, ಭಕ್ತರು, ಗ್ರಾಮಸ್ಥರು ಭಜನಾ ಮಂಗಲೋತ್ಸ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 