ಈದ್ಗಾ ಮೈದಾನದಲ್ಲಿ ಸಂಭ್ರಮದ ರಂಜಾನ್ ಹಬ್ಬ ಆಚರಣೆ
Festive Ramadan celebrations at Eidgah Ground
ಲೋಕದರ್ಶನ ವರದಿ
ಇಂಡಿ 21: ಪಟ್ಟಣದ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ಮುಸ್ಲಿಂ ಸಮುದಾಯದವರು ರಂಜಾನ್ ಹಬ್ಬಕ್ಕೆ ತೆರೆ ಎಳೆದರು. ಒಂದು ತಿಂಗಳು ಉಪವಾಸ ಆಚರಿಸಿದ ಬಳಿಕ ಜಕಾತ್, ಫಿತ್ರ ದಾನ ಮಾಡಿದರು. ಶ್ವೇತವಸ್ತ್ರ ಧರಿಸಿ ಗುಂಪು ಗುಂಪಾಗಿ ಖಬರ್ಸ್ಥಾನ ಹಾಗೂ ಮಸೀದಿಗಳತ್ತ ಬಂದ ಮುಸ್ಲಿಮರು ಮೊದಲು ಸಿಹಿ ಹಂಚಿ, ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ, ವಿನಿಮಯ ಮಾಡಿಕೊಂಡರು. ನಂತರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಹೊಸ ಬಟ್ಟೆಗಳಲ್ಲಿ, ಸಾಂಪ್ರದಾಯಿಕ ಪೋಷಾಕುಗಳಲ್ಲಿ ಕಂಗೊಳಿಸುತ್ತಿದ್ದ ಮಕ್ಕಳು ಹಬ್ಬದ ಸಂಭ್ರಮ ಹೆಚ್ಚಿಸಿದ್ದರು. ಸ್ನೇಹಿತರ, ಸಂಬಂಧಿಕರ ಮನೆಗೆ ತೆರಳಿ ಶುಭಾಶಯ ಕೋರಿದರು.ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಧರ್ಮ ಗುರು ಮೌಲಾನಾ ಶಕೀರ್ ಹುಸೇನ್ ಕಾಸ್ಮಿ ಮುಫ್ತಿ, ಅಬ್ದುಲ್ ರೆಹಮಾನ್ ಅರಬ್, ಹಫೀಜ್ ಫಿರೋಜ್ ಬಾಗವಾನ, ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ,
ಮಾಜಿ ಟಿಎಂಸಿ ಸದಸ್ಯ ಜಾವೀದ ಮೋಮಿನ್, ಜೈನುದ್ಧಿನ್ ಬಾಗವಾನ, ಪ್ರಶಾಂತ ಕಾಳೆ, ಜಟ್ಟಪ್ಪ ರಾವಳಿ, ಭರಮಣ್ಣ ಕಾವಳ್ಳಿ, ಮಹಿಬೂಬ್ ಅರಬ, ರಫೀಕ್ ಇಂಡೀಕರ, ರೇಸಾ ಅಸ್ತಕೇರ, ಅಸ್ಲಾಂ ಪಟೇಲ್, ಅಯೂಬ್ ಬಾಗವಾನ, ಅಬ್ದುಲ್ ರಹಿದ್ ಅರಬ, ಬಶೀರ್ ಇನಾಮದಾರ, ಷರೀಫ್ ಪಟೇಲ್, ಅಬ್ದುಲ್ ರಶೀದ್ ಮುಗಳಿ, ಶಬ್ಬೀರ ಖಾಜಿ, ನಜರ್ ಪಠಾಣ, ಯುನುಸ್ ರಾವಕರ್, ಹಸನ ಮುಜಾವರ, ಅಸ್ಲಾಂ ಕಡಣಿ, ಹುಮಾಯೂನ್ ಬಿಳವಾರ, ರಿಯಾಜ್ ಗೌಂಡಿ, ಮಹಿಬೂಬ್ ಮಕಾನದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 