ದೆಹಲಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದಕ್ಕೆ ಉಗ್ರನ ಪಟ್ಟ: ಕೇಜ್ರೀವಾಲ್ ಬೇಸರ
ನವದೆಹಲಿ, ಜ 29 : ತಮ್ಮನ್ನು ಭಯೋತ್ಪಾದಕ ಎಂದು ಕರೆದಿರುವ ಬಿಜೆಪಿ ನಾಯಕ ಪರ್ವೇಶ್ ವರ್ಮಾ ಹೇಳಿಕೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ದೆಹಲಿಗಾಗಿ ಕಳೆದ ಐದು ವರ್ಷಗಳಿಂದ ಹಗಲೂ ರಾತ್ರಿ ದುಡಿದಿದ್ದೇನೆ. ದೆಹಲಿಯ ಜನರಿಗಾಗಿ ಪ್ರತಿಯೊಂದನ್ನೂ ತ್ಯಾಗ ಮಾಡಿದ್ದೇನೆ. ರಾಜಕೀಯ ಸೇರಿದ ಮೇಲೆ ಜನರ ಜೀವನವನ್ನು ಸುಧಾರಿಸಲು ಹಲವು ಕಷ್ಟಗಳನ್ನು ಎದುರಿಸಿದ್ದೇನೆ. ಆದರೆ ಅದಕ್ಕೆ ಪ್ರತಿಯಾಗಿ ಇಂದು ಬಿಜೆಪಿ ನನ್ನನ್ನು ಉಗ್ರಗಾಮಿ ಎಂದು ಕರೆಯುತ್ತಿದೆ. ಅದು ನೋವುಂಟು ಮಾಡುತ್ತದೆ" ಎಂದಿದ್ದಾರೆ.
ಇದಕ್ಕೂ ಮುನ್ನ ಸಾರ್ವಜನಿಕ ಜಾಥಾದಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ, "ದೆಹಲಿಯಲ್ಲಿ ಕೇಜ್ರೀವಾಲ್ ನಂತಹ ಹಲವು ನಟ್ವರ್ ಲಾಲ್ ಮತ್ತು ಉಗ್ರಗಾಮಿಗಳು ಅವಿತಿದ್ದಾಋೆ. ನಾವು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗೆ ಹೋರಾಡಬೇಕೆ ಇಲ್ಲವೇ ದೆಹಲಿಯಲ್ಲಿ ಕೇಜ್ರೀವಾಲ್ ನಂತಹ ಉಗ್ರಗಾಮಿಯನ್ನು ಎದುರಿಸಬೇಕೆ ಎಂದು ತಿಳಿಯುತ್ತಿಲ್ಲ" ಎಂದಿದ್ದರು.
ವರ್ಮಾ ಅವರ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತೆಗೆದುಹಾಕಿದೆ.
ಮಂಗಳವಾರ ಕೂಡ ವಿವಾದಾತ್ಮಕ ಹೇಳಿಕೆ ನೀಡಿದ್ದ ವರ್ಮಾ, "ಶಾಹಿನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು 'ಅತ್ಯಾಚಾರಿಗಳು ಮತ್ತು ಕೊಲೆಗಡುಕರು' " ಎಂದಿದ್ದರು.
ವರ್ಮಾ ಜೊತೆಗೆ, ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರನ್ನು ಕೂಡ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಆಯೋಗ ಕೈಬಿಟ್ಟಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 