ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು
File FIR against MLA Muniratna
ಬೆಂಗಳೂರು 21: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಮುನಿರತ್ನ ಹಾಗೂ ಇತರ ಆರು ಜನ, ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದು, ತಾತ್ಕಾಲಿಕ ಶೆಡ್ಗಳನ್ನು ಕೆಡವಿದ್ದಾರೆ ಮತ್ತು ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ 20 ವರ್ಷದ ದಿನಗೂಲಿ ಕಾರ್ಮಿಕ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು, ಶಾಸಕ ಮುನಿರತ್ನ, ವಸಂತಕುಮಾರ್, ಚೆನ್ನಕೇಶವ, ನವೀನ್, ಶ್ರೀರಾಮ, ಪೀಣ್ಯ ಕಿಟ್ಟಿ ಮತ್ತು ಪೀಣ್ಯ ಗಂಗಾ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಪೀಣ್ಯದ ಎಸ್ಆರ್ಎಸ್ ವೃತ್ತದ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 