ತುಂಬಿದ ಹಿಡಕಲ್ ಜಲಾಶಯ: 9,000 ಕ್ಯೂಸೆಕ್ಸ್ ನೀರು ಹೊರಕ್ಕೆ
ಉಳ್ಳಾಗಡ್ಡಿ-ಖಾನಾಪೂರ 08: ಬೆಳಗಾವಿ ಹಾಗೂ ಬಾಗಲಕೋಟ ಜಿಲ್ಲೆಗಳ ಜೀವನಾಡಿಯಾದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ [ಹಿಡಕಲ್] ರಾಜಾಲಖಮಗೌಡಾ ಜಲಶಯದಿಂದ ಬುಧವಾರ ಸಂಜೆ ಜಲಾಶಯದ ಹತ್ತು ಕ್ರಸ್ಟ್ ಗೇಟ್ ಗಳಿಂದ 9 ಸಾವೀರ ಕ್ಯೂಸೆಕ್ಷ್ ಜಲರಾಶಿಯನ್ನು ಇಂದು ಜಲಾಶಯದಿಂದ ಹೊರಕ್ಕೆ ಬಿಡಲಾಯಿತು,
ಕಳೆದ ನಾಲ್ಕುವರ್ಷಗಳಲ್ಲಿ ಇಷ್ಟೊಂದು ನೀರು ಜಲಾಶಯಕ್ಕೆ ಹರಿದು ಬಂದಿರಲಿಲ್ಲ ಆದರೆ ಈ ಬಾರಿ ಘಟಪ್ರಭಾ ನದಿಯಿಂದ ಮಹಾರಾಷ್ಟ್ರದ ಘಟಪ್ರದೇಶಗಳಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಸುಮಾರು 9 ಸಾವೀರ ಕ್ಯೂಸೆಕ್ಸ್ ನೀರು ಹಿನ್ನಿರಿನ ಪ್ರದೇಶದಿಂದ ಹರಿದು ಬರುತ್ತಿದ್ದು ಹರಿದು ಬರುತ್ತಿರುವ 9 ಸಾವೀರ ಕ್ಯೂಸೆಕ್ಸ್ ನೀರನ್ನು ಘಟಪ್ರಭಾ ನದಿಗೆ ಇಂದು ಹರಿಬಿಡಲಾಯಿತು,
51 ಟಿಎಮ್ಸಿ ನೀರು ಜಲಾಸಯದಲ್ಲಿ ಸಂಗ್ರಹವಾದ ಹಿನ್ನೆಲೆಯಲ್ಲಿ ಈ ನೀರನ್ನು ಘಟಪ್ರಭಾ ನದಿಗೆ ಹರಿಬಿಡಲಾಗಿದೆಗಿದೆ ಎಂದು ಜಲಾಶಯದ ಸಹಾಯಕ ಅಭಿಯಂತರರಾದ ಅಲೋಕಶೆಟ್ಟಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಎಮ್,ನಾರಾಯಣ ಹಾಗೂ ಅಧೀಕ್ಷಕರಾದ ಸಿ,ಬಿ,ಹೀರೇಮಠ, ಹಾಗೂ ಹಿಡಕಲ್ ಡ್ಯಾಂ ನ ಮಹಾಮಂಡಳದ ಅಧ್ಯಕ್ಷರು ಉಪಾಧ್ಯಕ್ಷರು ನಿದೇಶಕ ಮಂಡಳಿಯವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 