ಡಾ.ಬಿ.ಎಫ್. ದಂಡಿನ ಅವರಿಗೆ ಅಂತಿಮ ನಮನ
Final tribute to Dr. B.F. Dandina
ಗದಗ 29 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಉತ್ತರ ಕರ್ನಾಟಕದ ಶಿಕ್ಷಣ ಭೀಷ್ಮ, ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತ ಡಾ. ಬಿ.ಎಫ್ ದಂಡಿನ ಅವರ ಅಂತಿಮಕ್ರಿಯೆಯು ರವಿವಾರ ಸ್ಥಳೀಯ ರಾಜೀವಗಾಂದಿ ನಗರದ ಕೆಎಸ್ಎಸ್ ಕಾಲೇಜ ಆವರಣದಲ್ಲಿನ ಜರುಗಿತು. ಅವರು ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾಗಿ 1965 ರಿಂದ ಇದುವರೆಗೂ 65 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಡಾ. ಬಿ. ಎಫ್. ದಂಡಿನ ಅವರು ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷ ರವೀಂದ್ರನಾಥ ದಂಡಿನ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಮರಿಮೊಮ್ಮಕ್ಕಳನ್ನು ಅಗಲಿದ್ದಾರೆ.
ಈ ಸಂದರ್ಭದಲ್ಲಿ ಗದುಗಿನ ಶಿವಾನಂದ ಮಠದ ಉಭಯ ಶ್ರೀಗಳು, ಹರ್ಲಾಪೂರದ ಪೂಜ್ಯಶ್ರೀ ಕೊಟ್ಟೂರೇಶ್ವರ ಶ್ರೀಗಳು, ವಿರೇಶ್ವರ ಪುಣ್ಯಾಶ್ರಮದ ಪೂಜ್ಯಶ್ರೀ ಕಲ್ಲಯ್ಯಜ್ಜನವರು, ಮುಖಂಡರುಗಳಾದ ಬೈರತಿ ಬಸವರಾಜ, ಮಾಜಿ ಸಂಸದ ಕೆ. ವಿರುಪಾಕ್ಷ, ರಾಜ್ಯಸಭಾ ಸದಸ್ಯ ಮಾ. ನಾಗರಾಜ, ಶಾಸಕರಾದ ಸಿ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಕೃಷ್ಣಗೌಡ್ರ ಪಾಟೀಲ, ಫಕ್ಕೀರ್ಪ ಹೆಬಸೂರ, ರುದ್ರಣ್ಣ ಗುಳಗುಳಿ, ರಾಜೇಂದ್ರ ಹಾವೇರಿ, ಮೈಲಾರ್ಪ ತಳಹಳ್ಳಿ, ಎಸ್.ಎಸ್.ಚವಟಗೇರ ಸೇರಿದಂತೆ ಮುಂತಾದವರು ಅಂತಿಮ ದರ್ಶನ ಪಡೆದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 