ಮರಿಯಮ್ಮದೇವಿಯ ಅಗ್ನಿ ಮಹೋತ್ಸವ
ಲೋಕದರ್ಶನ ವರದಿ
ಶಿರಹಟ್ಟಿ: ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗೌರಿ ಹುಣ್ಣಿಮೆಯ ದಿನವಾದ ಮಂಗಳವಾರ ಶ್ರೀ ಮರಿಯಮ್ಮದೇವಿ ಹಾಗೂ ಸ್ವಾರೆಮ್ಮದೇವಿಯ 65ನೇ ವರ್ಷದ ಅಗ್ನಿ ಮಹೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತ್ತು.
ಪಟ್ಟಣದಲ್ಲಿ ಮಂಗಳವಾರ ಮರಿಯಮ್ಮ ದೇವಿಯ ಅಗ್ನಿ ಪ್ರವೇಶದ ನಿಮಿತ್ಯ, ಬೆಳಗ್ಗೆಯಿಂದ ಹಳ್ಳದ ದುರುಗಮ್ಮನ ಗುಡಿಯಿಂದ ಬಜಾರ ರಸ್ತೆ ಮೂಲಕ ಎಲ್ಲ ಭಕ್ತರು ಡೊಳ್ಳು ಕುಣಿತದ ಮೂಲಕ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಾಗುತ್ತಾ, ದೇವಿಯ ಹಿಂದ ಎಲ್ಲಾ ಭಕ್ತರು ಉಧೋ ಉಧೋ ಎಂದು ಘೋಷಣೆ ಹಾಕುತ್ತಿರುವ ದೃಶ್ಯ ಸಮಾನ್ಯವಾಗಿತ್ತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮರಿಯಮ್ಮ ದೇವಿ ಹಾಗೂ ಸ್ವಾರೆಮ್ಮದೇವಿಯ ಪಾಲಿಕೆಯೊಂದಿಗೆ, ಬೇಡಿಕೊಂಡ ಸರ್ವ ಭಕ್ತರು ಅಗ್ನಿ ಪ್ರವೇಶ ಮಾಡುವುದರ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ನಂತರ ವಿವಿಧ ಗ್ರಾಮಗಳಿಂದ ಬಂದಂತಹ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 