ಮರಿಯಮ್ಮದೇವಿಯ ಅಗ್ನಿ ಮಹೋತ್ಸವ
ಲೋಕದರ್ಶನ ವರದಿ
ಶಿರಹಟ್ಟಿ: ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗೌರಿ ಹುಣ್ಣಿಮೆಯ ದಿನವಾದ ಮಂಗಳವಾರ ಶ್ರೀ ಮರಿಯಮ್ಮದೇವಿ ಹಾಗೂ ಸ್ವಾರೆಮ್ಮದೇವಿಯ 65ನೇ ವರ್ಷದ ಅಗ್ನಿ ಮಹೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತ್ತು.
ಪಟ್ಟಣದಲ್ಲಿ ಮಂಗಳವಾರ ಮರಿಯಮ್ಮ ದೇವಿಯ ಅಗ್ನಿ ಪ್ರವೇಶದ ನಿಮಿತ್ಯ, ಬೆಳಗ್ಗೆಯಿಂದ ಹಳ್ಳದ ದುರುಗಮ್ಮನ ಗುಡಿಯಿಂದ ಬಜಾರ ರಸ್ತೆ ಮೂಲಕ ಎಲ್ಲ ಭಕ್ತರು ಡೊಳ್ಳು ಕುಣಿತದ ಮೂಲಕ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಾಗುತ್ತಾ, ದೇವಿಯ ಹಿಂದ ಎಲ್ಲಾ ಭಕ್ತರು ಉಧೋ ಉಧೋ ಎಂದು ಘೋಷಣೆ ಹಾಕುತ್ತಿರುವ ದೃಶ್ಯ ಸಮಾನ್ಯವಾಗಿತ್ತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮರಿಯಮ್ಮ ದೇವಿ ಹಾಗೂ ಸ್ವಾರೆಮ್ಮದೇವಿಯ ಪಾಲಿಕೆಯೊಂದಿಗೆ, ಬೇಡಿಕೊಂಡ ಸರ್ವ ಭಕ್ತರು ಅಗ್ನಿ ಪ್ರವೇಶ ಮಾಡುವುದರ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ನಂತರ ವಿವಿಧ ಗ್ರಾಮಗಳಿಂದ ಬಂದಂತಹ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 