ಮರಿಯಮ್ಮದೇವಿಯ ಅಗ್ನಿ ಮಹೋತ್ಸವ
ಲೋಕದರ್ಶನ ವರದಿ
ಶಿರಹಟ್ಟಿ: ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗೌರಿ ಹುಣ್ಣಿಮೆಯ ದಿನವಾದ ಮಂಗಳವಾರ ಶ್ರೀ ಮರಿಯಮ್ಮದೇವಿ ಹಾಗೂ ಸ್ವಾರೆಮ್ಮದೇವಿಯ 65ನೇ ವರ್ಷದ ಅಗ್ನಿ ಮಹೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತ್ತು.
ಪಟ್ಟಣದಲ್ಲಿ ಮಂಗಳವಾರ ಮರಿಯಮ್ಮ ದೇವಿಯ ಅಗ್ನಿ ಪ್ರವೇಶದ ನಿಮಿತ್ಯ, ಬೆಳಗ್ಗೆಯಿಂದ ಹಳ್ಳದ ದುರುಗಮ್ಮನ ಗುಡಿಯಿಂದ ಬಜಾರ ರಸ್ತೆ ಮೂಲಕ ಎಲ್ಲ ಭಕ್ತರು ಡೊಳ್ಳು ಕುಣಿತದ ಮೂಲಕ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಾಗುತ್ತಾ, ದೇವಿಯ ಹಿಂದ ಎಲ್ಲಾ ಭಕ್ತರು ಉಧೋ ಉಧೋ ಎಂದು ಘೋಷಣೆ ಹಾಕುತ್ತಿರುವ ದೃಶ್ಯ ಸಮಾನ್ಯವಾಗಿತ್ತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮರಿಯಮ್ಮ ದೇವಿ ಹಾಗೂ ಸ್ವಾರೆಮ್ಮದೇವಿಯ ಪಾಲಿಕೆಯೊಂದಿಗೆ, ಬೇಡಿಕೊಂಡ ಸರ್ವ ಭಕ್ತರು ಅಗ್ನಿ ಪ್ರವೇಶ ಮಾಡುವುದರ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ನಂತರ ವಿವಿಧ ಗ್ರಾಮಗಳಿಂದ ಬಂದಂತಹ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 