ಜಮೀನಿನ ಶೆಡ್ಡನಲ್ಲಿ ಬೆಂಕಿ ಅವಘಡ: ಆಕಳು ಸಜೀವ ದಹನ
Fire accident in farm shed: Cows burnt alive
ಸಿಂದಗಿ 04: ತಾಲೂಕಿನ ಕೊಕಟನೂರ ಗ್ರಾಮದ ಸೋಮಲಿಂಗ ಅಗಸರ ಎಂಬುವವರ ಜಮೀನಿನ ಶೆಡ್ಡನಲ್ಲಿ 6 ಆಕಳು, ಮಶೀನ್, ಮೇವು, ಸೇರಿದಂತೆ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಅಗ್ನಿ ಅನಾಹುತದಲ್ಲಿ 4ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿಯಾಗಿವೆ. 4.70ಲಕ್ಷ ರೂ. ಮೌಲ್ಯದ ಹಸು ಹಾಗೂ ಕೆಲವು ವಸ್ತುಗಳ ರಕ್ಷಣೆ ಮಾಡಲಾಗಿದೆ. 1 ಆಕಳು ಸಜೀವ ದಹನವಾಗಿದೆ, ಇನ್ನೊಂದಕ್ಕೆ ತೀವ್ರ ಗಾಯವಾಗಿದೆ. ರಕ್ಷಣೆಗೆ ಮುಂದಾದ ಮಾಲೀಕ ಸೋಮಲಿಂಗ ಅಗಸರಗೆ ಬೆಂಕಿ ನಿಂದಿಸಲು ಪ್ರಯತ್ನಿಸಿದಾಗ ಸಣ್ಣಪುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಿಂದಿಸುವಲ್ಲಿ ಯಶಸ್ವಿಯಾಗಿ 4 ಆಕಳು ಹಾಗೂ ಮಾಲೀಕನ್ನು ರಕ್ಷಣೆ ಮಾಡಿದ್ದಾರೆ.
ಈ ವೇಳೆ ಎಫ್ಎಸ್ಒಎಂ.ಬಿ.ಪೂಜಾರಿ, ಸಿಬ್ಬಂದಿಗಳಾದ ಶೀಮಲಿಂಗಯ್ಯಮಠ, ರವಿ ನಾಯಕ, ಶ್ರೀಧರ ರತ್ನಪ್ಪಗೋಳ, ವಿಜಯಕುಮಾರ ಬಿರಾದಾರ, ಹನುಮಂತ ಕುಂಬಾರಸೇರಿದಂತೆ ಅನೇಕರಿದ್ದರು. ಇನ್ನೂ ಈ ಪ್ರಕರಣ ಸಿಂದಗಿಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 