ಶ್ರೀಶಾಂತ್ ಮನೆಯಲ್ಲಿ ಬೆಂಕಿ: ಯಾವುದೇ ಪ್ರಾಣಾಪಾಯವಿಲ್ಲ
ನವದೆಹಲಿ, ಆ 24 ಭಾರತದ ಕ್ರಿಕೆಟಿಗ ಎಸ್. ಶ್ರೀಶಾಂತ್ ಅವರ ಕೊಚ್ಚಿಯಲ್ಲಿರುವ ಮನೆಗೆ ತಡರಾತ್ರಿ ಬೆಂಕಿ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ಗಾಯಗೊಂಡಿರುವ ಬಗ್ಗೆ ವರದಿ ದಾಖಲಾಗಿಲ್ಲ. ಕೊಚ್ಚಿಯ ಎಡಪಲ್ಲಿಯಲ್ಲಿರುವ ಶ್ರೀಶಾಂತ್ ಅವರ ಮನೆಯ ಕೆಳಗಿನ ಮಹಡಿಯ ಹಾಲ್ ಹಾಗೂ ಬೆಡ್ ರೂಂ ಗೆ ತಡರಾತ್ರಿ 2 ರ ಸಮಯದಲ್ಲಿ ಬೆಂಕಿ ಬಿದ್ದಿತ್ತು. ಆದರೆ, ಶ್ರೀಶಾಂತ್ ಅವರು ಮನೆಯಲ್ಲಿ ಇರಲಿಲ್ಲ. ಅವರ ಪತ್ನಿ ಹಾಗೂ ಮಕ್ಕಳು ಹಾಗೂ ಇಬ್ಬರು ಕೆಲಸದವರು ಮೊದಲನೇ ಮಹಡಿಯಲ್ಲಿ ಇದ್ದರು. ಶ್ರೀಶಾಂತ್ ಅವರ ಮನೆಯಿಂದ ಹೊಗೆ ಹೊರಗಡೆ ಬರುತ್ತಿದ್ದನ್ನು ಗಮನಿಸಿದ ನೆರೆಹೊರೆಯವರು ಗಾಂಧಿನಗರ ಮತ್ತು ತ್ರಿಕಕ್ಕಾರ ಅಗ್ನಶಾಮಕ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಮನೆಯ ಗ್ಲಾಸ್ ಹೊಡೆದು ಒಳ ನುಗ್ಗಿ ಶ್ರೀಶಾಂತ್ ಅವರ ಕುಟುಂಬದ ಸದಸ್ಯರನ್ನು ರಕ್ಷಿಸಿದರು. ನಂತರ, ಬೆಂಕಿಯನ್ನು ಹಾರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 