ಫರ್ನೀಚರ್ ಅಂಗಡಿಯಲ್ಲಿನ ಪೀಠೋಪಕರಣಗಳ ಕಾರ್ಖಾನೆಯಲ್ಲಿ ಅಗ್ನಿ ಅವಘಡ
Fire breaks out at furniture factory in furniture store
ಲೋಕದರ್ಶನ ವರದಿ,
ಜಮಖಂಡಿ 14: ನಗರದ ಮುಧೋಳ ರಸ್ತೆಯ ಹೊರವಲಯದಲ್ಲಿರುವ ಆಲಗೂರ ಫರ್ನೀಚರ್ ಅಂಗಡಿಯಲ್ಲಿನ ಪೀಠೋಪಕರಣಗಳ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂ,ಗಳ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಅಂಗಡಿಯ ಮಾಲಿಕ ಮಹಮ್ಮದ ಸಾಧಿಕ್ ಆಲಗೂರ ಅವರಿಗೆ ಸೇರಿದ ಕಾರ್ಖಾನೆಯಲ್ಲಿ ಮಧ್ಯಾಹ್ನದ ವೇಳೆಗೆ ನಮಾಜ ಮಾಡಲು ಹೋದ ಸಮಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಕಾರ್ಖಾನೆಯಲ್ಲಿದ್ದ ದುಬಾರಿ ಬೆಲೆಯ ಸೋಫಾಗಳು, ಕುರ್ಚಿಗಳು, ಟ್ರೇಜರಿಗಳು ಸಿದ್ಧಪಡಿಸಿದ ಫರ್ನಿಚರ್ಗಳು ಹಾಗೂ ಕುಷನ್ ಕಚ್ಚಾ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಜಮಖಂಡಿ ಮತ್ತು ಮುಧೋಳ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳಾದ ಎಸ್.ಒ.ಎನ್.ಪಿ ಹೂಗಾರ, ಎಫ್.ಡಿ. ಎ.ವಾಯ್.ಹನಬರಟ್ಟಿ, ಎ.ಎಸ್.ಹಳೇಗೌಡರ, ಎಮ್.ಬಿ.ಕುಂಚನೂರ, ಬಿ.ಎಮ್.ಗಣಾಚಾರಿ, ಎಮ್.ಬಿ.ಬನ್ನಪ್ಪನ್ನವರ, ಬಿ.ಎಸ್.ಬಿರಾದಾರ, ಎಸ್.ಎ.ಮಾಳಶೆಟ್ಟಿ ಅವರು ಅಗ್ನಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ನಿಖರವಾದ ಮಾಹಿತಿ ತಿಳಿದುಬಂದಿರುವುದಿಲ್ಲ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 