ಶಿರವಾಡದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಅನಾಹುತ
Fire breaks out at solid waste disposal unit in Shirwad
ಕಾರವಾರ 06 : ಕಾರವಾರ ಹೊರ ವಲಯದ ಶಿರವಾಡದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪ್ಲಾಸ್ಟಿಕ್ ಸಂಗ್ರಹಕ್ಕೆ ಬೆಂಕಿ ಹೊತ್ತಿ ಭಾರೀ ಅವಘಡ ನಡೆದಿದೆ. ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಸುತ್ತಲ ಜನವಸತಿ ಪ್ರದೇಶದಲ್ಲಿ ಆತಂಕ ತಂದಿತು. ವಾತಾವರಣ ಕಲುಷಿತ ಗೊಂಡಿತು. ಬೆಂಕಿ ಕಂಡು ಸ್ಥಳೀಯರು ಆಗ್ನಿ ಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಆಗ್ನಿ ಶಾಮಕದಳದಿಂದ ಸತತ ನಾಲ್ಕು ತಾಸು ಕಾರ್ಯಾಚರಣೆ ನಡೆದಿದೆ. ಆಗ್ನಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಕಾರವಾರ ಆಗ್ನಿ ಶಾಮಕ ವಾಹನ ಹೊರತುಪಡಿಸಿ, ಬಿಣಗಾ, ಅಂಕೋಲಾ ದಿಂದ ಅಗ್ನಿಶಾಮಕ ವಾಹನಗಳನ್ನು ತರಿಸಲಾಯಿತು. ಅವಘಡ ಪರಿಸ್ಥಿತಿ ನಿಭಾಯಿಸುವ ಪ್ರಯತ್ನ ಯಶಸ್ವಿಯಾಗಿದೆ. ಯಾವುದೇ ಜೀವ ಹಾನಿ ಆಗಿಲ್ಲ ಎಂದು ನಗರಸಭೆಯ ಅಧಿಕಾರಿ ಜಗದೀಶ್ ಹುಲಗಜ್ಜಿ ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 