ದೆಹಲಿಯ ಅನಾಜ್ ಮಂದಿಯಲ್ಲಿ ಬೆಂಕಿ : 30 ಕ್ಕೂ ಹೆಚ್ಚು ಸಾವು
ನವದೆಹಲಿ, ಡಿ 8 : ದೆಹಲಿಯ ರಾಣಿ ಝಾನ್ಸಿ ರಸ್ತೆ ಬಳಿಯ ಅನಾಜ್ ಮಂದಿಯಲ್ಲಿನ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದು 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಬೆಳಗ್ಗೆ 5.20 ರ ಸುಮಾರಿ ಮಾಹಿತಿ ದೊರೆತಿದ್ದು ತಕ್ಷಣವೇ 25 ಅಗ್ನಿ ಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು ಎಂದು ಅಗ್ನಿ ಶಾಮಕ ಮೂಲ ತಿಳಿಸಿದೆ. ಅನೇಕರು ಉಸಿರುಗಟ್ಟಿ ಅಸುನೀಗಿದ್ದು ಹಲವರು ಸ್ಥಳಾಂತರಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಲೋಕ್ ನಾಯಕ್ ಜೈಪ್ರಕಾಶ್ ಆಸ್ಪತ್ರೆ ಮತ್ತು ಹಿಂದೂ ರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಆಸ್ಪತ್ರೆಗೆ ಕರೆತರಲಾಗಿದ್ದ 14 ಜನರು ಮೃತಪಟ್ಟಿದ್ದು ಅನೇಕ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೆಡಿಕಲ್ ಸೂಪರಿಂಟೆಂಡೆಂಟ್ ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 