ಸೆಟ್ನಲ್ಲಿ ಬೆಂಕಿ: ಆಂಜನೇಯನೇ ನಮ್ಮನ್ನು ಕಾಪಾಡಿದ್ದಾನೆ- ಶಿವರಾಜ್ ಕುಮಾರ್
ನೆಲಮಂಗಲ, ಜ 16: ಆಂಜನೇಯ ನಮ್ಮ ಜೊತೆಗಿದ್ದರಿಂದ ಇಂದು ನಮ್ಮನ್ನು ಕಾಪಾಡಿದ್ದಾನೆ ಎಂದು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿಂದು ಭಜರಂಗಿ - 2 ಚಿತ್ರದ ಚಿತ್ರೀಕರಣದ ವೇಳೆ ಅಗ್ನಿ ಅವಘಡ ಸಂಭವಿಸಿದ ಕುರಿತು ಮಾತನಾಡಿದ ಅವರು, ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ. ಗ್ಯಾಸ್ ಓಪನ್ ಆಗಿದ್ದರೆ ತುಂಬಾ ದೊಡ್ಡ ಅವಘಡ ಸಂಭವಿಸುತ್ತಿತ್ತು, ಆದರೆ, ಸೆಟ್ ಗೆ ಗೋಣಿಚೀಲ ಬಳಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದರು.
ಚಿತ್ರೀಕರಣದಲ್ಲಿ ತಾವು ಸೇರಿ 15 ರಿಂದ 20 ಜನ ಮುಖ್ಯ ಕಲಾವಿದರು ಹಾಗೂ ಸರಿಸುಮಾರ 200 ಜನ ಸಹಾಯಕ ಕಲಾವಿದರು ಇದ್ದರು. ಆದರೆ, ಯಾರೊಬ್ಬರಿಗೂ ಯಾವುದೇ ಹಾನಿ ಆಗಿಲ್ಲ, ಅನಾಹುತನೂ ಆಗಿಲ್ಲ. ಇಂದು ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ ಎಂದರು.
ಚಿತ್ರಕ್ಕೆ ಭಜರಂಗಿ ಹೆಸರಿಟ್ಟಿರುವುದರಿಂದ ಯಾವುದೇ ಅನಾಹುತವಾಗಿಲ್ಲ. ಆಂಜನೇಯ ನಮ್ಮ ಜೊತೆ ಇದ್ದಾನೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 