ಸೆಟ್ನಲ್ಲಿ ಬೆಂಕಿ: ಆಂಜನೇಯನೇ ನಮ್ಮನ್ನು ಕಾಪಾಡಿದ್ದಾನೆ- ಶಿವರಾಜ್ ಕುಮಾರ್
ನೆಲಮಂಗಲ, ಜ 16: ಆಂಜನೇಯ ನಮ್ಮ ಜೊತೆಗಿದ್ದರಿಂದ ಇಂದು ನಮ್ಮನ್ನು ಕಾಪಾಡಿದ್ದಾನೆ ಎಂದು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿಂದು ಭಜರಂಗಿ - 2 ಚಿತ್ರದ ಚಿತ್ರೀಕರಣದ ವೇಳೆ ಅಗ್ನಿ ಅವಘಡ ಸಂಭವಿಸಿದ ಕುರಿತು ಮಾತನಾಡಿದ ಅವರು, ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ. ಗ್ಯಾಸ್ ಓಪನ್ ಆಗಿದ್ದರೆ ತುಂಬಾ ದೊಡ್ಡ ಅವಘಡ ಸಂಭವಿಸುತ್ತಿತ್ತು, ಆದರೆ, ಸೆಟ್ ಗೆ ಗೋಣಿಚೀಲ ಬಳಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದರು.
ಚಿತ್ರೀಕರಣದಲ್ಲಿ ತಾವು ಸೇರಿ 15 ರಿಂದ 20 ಜನ ಮುಖ್ಯ ಕಲಾವಿದರು ಹಾಗೂ ಸರಿಸುಮಾರ 200 ಜನ ಸಹಾಯಕ ಕಲಾವಿದರು ಇದ್ದರು. ಆದರೆ, ಯಾರೊಬ್ಬರಿಗೂ ಯಾವುದೇ ಹಾನಿ ಆಗಿಲ್ಲ, ಅನಾಹುತನೂ ಆಗಿಲ್ಲ. ಇಂದು ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ ಎಂದರು.
ಚಿತ್ರಕ್ಕೆ ಭಜರಂಗಿ ಹೆಸರಿಟ್ಟಿರುವುದರಿಂದ ಯಾವುದೇ ಅನಾಹುತವಾಗಿಲ್ಲ. ಆಂಜನೇಯ ನಮ್ಮ ಜೊತೆ ಇದ್ದಾನೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 