ಸೆಟ್ನಲ್ಲಿ ಬೆಂಕಿ: ಆಂಜನೇಯನೇ ನಮ್ಮನ್ನು ಕಾಪಾಡಿದ್ದಾನೆ- ಶಿವರಾಜ್ ಕುಮಾರ್
ನೆಲಮಂಗಲ, ಜ 16: ಆಂಜನೇಯ ನಮ್ಮ ಜೊತೆಗಿದ್ದರಿಂದ ಇಂದು ನಮ್ಮನ್ನು ಕಾಪಾಡಿದ್ದಾನೆ ಎಂದು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿಂದು ಭಜರಂಗಿ - 2 ಚಿತ್ರದ ಚಿತ್ರೀಕರಣದ ವೇಳೆ ಅಗ್ನಿ ಅವಘಡ ಸಂಭವಿಸಿದ ಕುರಿತು ಮಾತನಾಡಿದ ಅವರು, ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ. ಗ್ಯಾಸ್ ಓಪನ್ ಆಗಿದ್ದರೆ ತುಂಬಾ ದೊಡ್ಡ ಅವಘಡ ಸಂಭವಿಸುತ್ತಿತ್ತು, ಆದರೆ, ಸೆಟ್ ಗೆ ಗೋಣಿಚೀಲ ಬಳಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದರು.
ಚಿತ್ರೀಕರಣದಲ್ಲಿ ತಾವು ಸೇರಿ 15 ರಿಂದ 20 ಜನ ಮುಖ್ಯ ಕಲಾವಿದರು ಹಾಗೂ ಸರಿಸುಮಾರ 200 ಜನ ಸಹಾಯಕ ಕಲಾವಿದರು ಇದ್ದರು. ಆದರೆ, ಯಾರೊಬ್ಬರಿಗೂ ಯಾವುದೇ ಹಾನಿ ಆಗಿಲ್ಲ, ಅನಾಹುತನೂ ಆಗಿಲ್ಲ. ಇಂದು ಭಜರಂಗಿಯೇ ನಮ್ಮನ್ನು ಕಾಪಾಡಿದ್ದಾನೆ ಎಂದರು.
ಚಿತ್ರಕ್ಕೆ ಭಜರಂಗಿ ಹೆಸರಿಟ್ಟಿರುವುದರಿಂದ ಯಾವುದೇ ಅನಾಹುತವಾಗಿಲ್ಲ. ಆಂಜನೇಯ ನಮ್ಮ ಜೊತೆ ಇದ್ದಾನೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 