ಭತ್ತದ ಬಣವೆಗೆ ಬೆಂಕಿ : ರೈತನಿಗೆ ಅಪಾರ ನಷ್ಟ
ಲೋಕದರ್ಶನ ವರದಿ
ಮುಂಡಗೋಡ 30: ಭತ್ತದ ಕಾಳಿನ ಹುಲ್ಲಿನ ಬಣವೆಗೆ ವಿದ್ಯುತ್ ತಂತಿ ಸ್ಪರ್ಶದಿಂದ ಬೆಂಕಿ ತಗುಲಿ ರೈತನಿಗೆ ಅಪಾರ ನಷ್ಟವುಂಟಾದ ಘಟನೆ ತಾಲೂಕಿನ ಇಂದೂರ ಗ್ರಾಮದಲ್ಲಿ ನಡೆದಿದೆ.
ಭತ್ತದ ಬಣವೆಯು ಪರಶುರಾಮ ಬಮ್ಮಿಗಟ್ಟಿ ಎಂಬ ರೈತನಿಗೆ ಸೇರಿದ್ದು ಎಂದು ಹೇಳಲಾಗಿದೆ ತಾಲೂಕಿನ ಅಗಡಿ ರಸ್ತೆಯಲ್ಲಿರುವ ತಮ್ಮ ಹೊಲದಲ್ಲಿ ಸುಮಾರು 6ಎಕರೆಯಷ್ಟು ಜಮೀನಿನಲ್ಲಿ ಬೆಳೆದ ಭತ್ತದ ಕಾಳಿನ ಬಣವೆಯನ್ನು ಹಾಕಿದ್ದರು. ಆಕಸ್ಮಿವಾಗಿ ವಿದ್ಯುತ್ ತಂತಿ ಸ್ಪರ್ಶದಿಂದ ಬೆಂಕಿ ಬಣವಿಗೆ ತಗುಲಿದೆ. ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕದಳದವರು ಪ್ರಯತ್ನಿಸಿದರಾದರೂ ಬೆಂಕಿಯ ಕೆನ್ನಾಲಿಗಿಗೆ ಭತ್ತದ ಬಣವೆ ಸುಟ್ಟು ಕರಕಲಾಗಿತ್ತು. ಈ ಘಟನೆಯಿಂದ ಅಪಾರ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಕೆ.ಆರ್. ಮಾಳಗಿ, ಬಸವರಾಜ ಇಂಚಲ, ಲಕ್ಷ್ಮಣ ಪಟಗಾರ, ಮಹಮ್ಮದ ಅಲಿ ಹಂಚಿನಮನಿ, ಸಂತೋಷ ಪಾಟೀಲ, ದುರ್ಗಪ್ಪ ಹರಿಜನ ಕಾಯರ್ಾಚರಣೆಯಲ್ಲಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 