ಸೇನಾ ವಾಹನದ ಮೇಲೆ ಗುಂಡಿನ ದಾಳಿ: 3 ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಸೋಮವಾರ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಮೂವರು ಉಗ್ರರು ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಟಾಲ್ ಪ್ರದೇಶದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಮೂವರು ಉಗ್ರರು ಸೇನಾ ವಾಹನದ ಮೇಲೆ ಹಲವು ಸುತ್ತು ಗುಂಡು ಹಾರಿಸಿದ್ದರು. ಮೂಲಗಳ ಪ್ರಕಾರ ಭದ್ರತಾ ಪಡೆಗಳು ತತ್ ಕ್ಷಣವೇ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ಪ್ರಾರಂಭಿಸಿದ್ದವು.

ದೀಪಾವಳಿ ಹಬ್ಬದ ತಯಾರಿಗಾಗಿ ಜಮ್ಮು ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದ ವೇಳೆ ಈ ಘಟನೆ ನಡೆದಿದೆ. ಭದ್ರತಾ ಪಡೆಗಳು ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಿವೆ.