ಪ್ರಥಮ ಚಿಕಿತ್ಸಾ ಜ್ಞಾನದಿಂದ ಜೀವ ರಕ್ಷಣೆ ಸಾಧ್ಯ
First aid knowledge can save lives
ವಿಜಯಪುರ 30: ಇಂದಿನ ವೇಗದ ಜೀವನದಲ್ಲಿ ಸಂಭವಿಸುವ ಅಪಘಾತಗಳು ಹಾಗೂ ಅನಾಹುತ ಸಂದರ್ಭಗಳಲ್ಲಿ ಜೀವ ರಕ್ಷಣೆಗಾಗಿ ಪ್ರಥಮ ಚಿಕಿತ್ಸೆ ಕುರಿತು ಜ್ಞಾನ ಅವಶ್ಯಕವಾಗಿದೆ ಎಂದು ಮಹಿಳಾ ವಿವಿಯ ದೈಹಿಕ ಶಿಕ್ಷಣ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ ರಾಜಕುಮಾರ ಪಿ. ಮಾಲಿಪಾಟೀಲ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಮತ್ತು ವಿಜಯಪುರದ ಅಲರ್ಟ ಎನ್.ಜಿ.ಓ. ಚೆನೈಬೇಸ್ ಇವರ ಸಹಯೋಗದೊಂದಿಗೆ ಇತ್ತೀಚಿಗೆ ಹಮ್ಮಿಕೊಂಡಿದ್ದ ಉಪಕರಣಗಳೊಂದಿಗೆ ಪ್ರಥಮ ಚಿಕಿತ್ಸೆ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಥಮ ಚಿಕಿತ್ಸೆ ಇಂದಿನ ಸಮಾಜದಲ್ಲಿ ಅತ್ಯಂತ ಅಗತ್ಯವಾದ ಕೌಶಲ್ಯವಾಗಿದ್ದು, ಇಂತಹ ತರಬೇತಿಗಳ ಮೂಲಕ ವಿದ್ಯಾರ್ಥಿನಿಯರು ಸಮಾಜದಲ್ಲಿ ನಡೆಯುವ ಅಪಘಾತ, ಅವಘಡಗಳ ಸಂದರ್ಭಗಳಲ್ಲಿ ಜೀವ ಉಳಿಸುವ ಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಪ್ರಾಯೋಗಿಕ ಜ್ಞಾನದಿಂದ ಮಾತ್ರ ನಿಜವಾದ ಸಮಾಜಸೇವೆ ಸಾಧ್ಯವಾಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮೊಹಮ್ಮದ್ ಗೌಸರ ಮಾತನಾಡಿ, ಪ್ರಥಮ ಚಿಕಿತ್ಸೆ ಹೇಗೆ ಪ್ರಾರಂಭವಾಯಿತು ಮತ್ತು ಅದನ್ನು ಕಲಿಯುವುದರಿಂದ ದೊರೆಯುವ ಉಪಯೋಗಗಳ ಕುರಿತು ಉಪಕರಣಗಳ ಸಹಾಯದಿಂದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಭಾಗದ ಮುಖ್ಯಸ್ಥ ಪ್ರೊ. ಹನುಮಂತಯ್ಯ ಪೂಜಾರಿ ಮಾತನಾಡಿ, ಪ್ರಥಮ ಚಿಕಿತ್ಸೆ ಎಂಬುದು ದೈಹಿಕ ಶಿಕ್ಷಣ ಶಿಕ್ಷಕರಿಗೆ ಅತ್ಯಂತ ಅವಶ್ಯಕವಾದ ಜ್ಞಾನವಾಗಿದ್ದು, ಕ್ರೀಡೆಗಳ ಸಮಯದಲ್ಲಿ ಕ್ರೀಡಾಪಟುಗಳಿಗೆ ಅಪಘಾತಗಳು ಸಂಭವಿಸಿದಾಗ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಹೆಚ್ಚಿನ ಗಾಯ ಅಥವಾ ನೋವು ತಪ್ಪಿಸಲು ಸಹಾಯಕವಾಗುವ ಉತ್ತಮ ವಿದ್ಯೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೊ,ಸಕ್ಪಾಲ್ ಹೂವಣ್ಣ, ಪ್ರೊ, ಶ್ರೀನಿವಾಸ ಹಾಗೂ ಡಾ.ಕಿರಣ್ ಜಿ,ಎನ್, ವಿವಿಧ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು
ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಉಪಾಧ್ಯೆ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅಶ್ವಿನಿ ನಿರೂಪಿಸಿದರು. ಶಿಭಾ ರೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ನಂದಿನಿ ಪಾಟೀಲ್ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 