ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರ ಸಾವು
Fisherman dies after being struck by lightning on beach
ಕಾರವಾರ 17 : ಹೊನ್ನಾವರದ ಅಪ್ಸರಕೊಂಡ ಕಡಲತೀರದಲ್ಲಿ ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರ ಸಾವನ್ನಪ್ಪಿದ ಘಟನೆ ನಡೆದಿದೆ. ಹೊನ್ನಾವರ ವಿನಾಯಕ ಖಾರ್ವಿ ಮೃತಪಟ್ಟ ಮೀನುಗಾರ. ಇವರು ಪಾತಿ ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.
ಹೊನ್ನಾವರದಲ್ಲಿ ನಿನ್ನೆ ಗುಡುಗು ಸಿಡಿಲು ಸಹಿತ ಮಳೆ ಸುರಿದಿತ್ತು. ಹೊನ್ನಾವರದಲ್ಲಿ ಇನ್ನೊಂದು ಪ್ರಕರಣದಲ್ಲಿ ಸಿಡಿಲು ಬಡಿದು ಪ್ರವಾಸಿಗರಿಗೆ ಗಾಯವಾದ ಘಟನೆ ಸಹ ನಡೆದಿದೆ. ಮಳೆ ಬರುವ ಸಮಯದಲ್ಲಿ ಪ್ರವಾಸಿಗರು ಕಡಲತೀರಕ್ಕೆ ಬಂದಿದ್ದರು. ಹೊನ್ನಾವರದ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಸಿಡಿಲು ಬಡಿದು ಗಾಯಗೊಂಡ ಪ ದರ ಪ್ರವಾಸಿರಿಗೆ ಚಿಕಿತ್ಸೆ ನೀಡಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿವೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 